ಮೋದಿ ಸರ್ಕಾರದ ವಿರುದ್ಧ ಒಂದಾದ ಪ್ರತಿಪಕ್ಷಗಳು; ಸಭೆಗೆ ಗೈರಾಗಲಿದೆ ಆರ್ ಎಲ್ ಡಿ, ಬಿಎಸ್ ಪಿ
Team Udayavani, Jun 22, 2023, 3:42 PM IST
ಹೊಸದಿಲ್ಲಿ: ಮೋದಿ ಸರ್ಕಾರದ ವಿರುದ್ದ ಸ್ಪರ್ಧೆ ನಡೆಸಲು ಒಂದಾಗಲು ಯತ್ನಿಸುತ್ತಿರುವ ಪ್ರತಿಪಕ್ಷಗಳಲ್ಲಿ ಬಿರುಕು ಮೂಡುತ್ತಿದೆ. ಬಿಹಾರದ ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಬಿಎಸ್ ಪಿ ಮತ್ತು ಆರ್ ಎಲ್ ಡಿ ಪಕ್ಷಗಳು ಗೈರಾಗಲಿದೆ.
ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಮುಖ್ಯಸ್ಥ ಜಯಂತ್ ಚೌಧರಿ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕಾರಣ ಶುಕ್ರವಾರ ಪಾಟ್ನಾದಲ್ಲಿ ಬೃಹತ್ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.
ಉತ್ತರ ಪ್ರದೇಶದ, ಬಿಎಸ್ ಪಿ ನಾಯಕಿ ಮಾಯಾವತಿ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಗುರಿಯಾಗಿಸಿಕೊಂಡು ಸರಣಿ ಟ್ವೀಟ್ ಮಾಡಿದ್ದು, ಪಾಟ್ನಾ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷಗಳು ಜಂಟಿಯಾಗಿ ಸಮಸ್ಯೆಗಳನ್ನು ಎತ್ತುತ್ತಿದ್ದರೂ, ನಿತೀಶ್ ಕುಮಾರ್ ಅವರು ಆಯೋಜಿಸಿರುವ ಪಾಟ್ನಾ ಸಭೆಯು “ಹೃದಯಗಳಲ್ಲ, ಕೈ ಜೋಡಿಸುವಂತಿದೆ” ಎಂದು ಮಾಯಾವತಿ ಹೇಳಿದರು.
ಇದನ್ನೂ ಓದಿ:Shock!; ಆಶ್ರಯ ಮನೆಯಲ್ಲಿರುವ ಅಜ್ಜಿಗೆ ಬಂತು 1.03 ಲಕ್ಷ ರೂ. ಕರೆಂಟ್ ಬಿಲ್ !
ಹಣದುಬ್ಬರ, ಬಡತನ, ನಿರುದ್ಯೋಗ, ಹಿಂದುಳಿದಿರುವಿಕೆ, ಅನಕ್ಷರತೆ, ಜನಾಂಗೀಯ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ಬಳಲುತ್ತಿರುವ ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಂತಹ ಪಕ್ಷಗಳು ಮಾನವೀಯ ಸಮಾನತೆಯ ಸಂವಿಧಾನವನ್ನು ಜಾರಿಗೆ ತರಲು ಸಮರ್ಥವಾಗಿಲ್ಲ ಎಂಬುದು ಬಹುಜನರ ಸ್ಥಿತಿಯಿಂದ ಸ್ಪಷ್ಟವಾಗಿದೆ” ಎಂದು ಯುಪಿ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದರು.
ಪ್ರತಿಪಕ್ಷಗಳನ್ನು ಒಗ್ಗೂಡಿಸುತ್ತಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಸಭೆಯನ್ನು ಕರೆದಿದ್ದಾರೆ.
ಪಾಟ್ನಾದ ಪ್ರತಿಪಕ್ಷ ಸಭೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಎಂಕೆ ಸ್ಟಾಲಿನ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಎಂ.ಕೆ. ಶರದ್ ಪವಾರ್, ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ