ಮೋದಿ ಸೋಲಿಸಲು ನಾವೇ ಸಾಕು ; ‘ಕೈ’ ಜೊತೆ ಮೈತ್ರಿಯಿಲ್ಲ: ಮಾಯಾವತಿ
Team Udayavani, Mar 12, 2019, 12:14 PM IST
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗಳಿಗಾಗಿ ಉತ್ತರಪ್ರದೇಶದಲ್ಲಿ ತನ್ನ ಬದ್ಧ ರಾಜಕೀಯ ಎದುರಾಳಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಮೋದಿ ನೇತೃತ್ವದ ಎನ್.ಡಿ.ಎ.ಯನ್ನು ಕೇಂದ್ರದಲ್ಲಿ ಪದಚ್ಯುತಗೊಳಿಸಲು ನಮ್ಮ ನಡುವಿನ ಮೈತ್ರಿಯೇ ಸಾಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತು ಉತ್ತರಪ್ರದೇಶ ಸೇರಿದಂತೆ ಬೇರಿನ್ಯಾವುದೇ ರಾಜ್ಯದಲ್ಲಿ ಬಿ.ಎಸ್.ಪಿ.ಯು ಕಾಂಗ್ರೆಸ್ ಪಕ್ಷದ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನೇತೃತ್ವದಲ್ಲಿ ರೂಪುಗೊಂಡಿರುವ ‘ಮಹಾ ಮೈತ್ರಿ’ಗೆ ಮಾಯಾ ಸಮ್ಮತಿ ಇಲ್ಲವೆಂಬುದು ಮತ್ತೂಮ್ಮೆ ಸ್ಪಷ್ಟವಾಗಿದೆ.
‘ಬಿ.ಎಸ್.ಪಿ. ಮತ್ತು ಎಸ್.ಪಿ. ನಡುವೆ ‘ಪರಸ್ಪರ ಗೌರವ’ ಮತ್ತು ‘ಪ್ರಾಮಾಣಿಕ ಉದ್ದೇಶ’ದಿಂದ ಕೂಡಿದ ಮೈತ್ರಿ ಏರ್ಪಟ್ಟಿದೆ. ಹಾಗಾಗಿ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಈ ನಮ್ಮ ಮೈತ್ರಿಯೇ ಸಾಕು’ ಎಂಬುದು ಮಾಯಾವತಿಯವರ ಆತ್ಮವಿಶ್ವಾಸದ ನುಡಿ. ಉತ್ತರಪ್ರದೇಶ ಹೊರತುಪಡಿಸಿ ಇನ್ನುಳಿದ ರಾಜ್ಯಗಳ ಬಿ.ಎಸ್.ಪಿ. ನಾಯಕರನ್ನುದ್ದೇಶಿಸಿ ಮಾಯಾವತಿಯವರು ಮಾತನಾಡುತ್ತಾ ಈ ಮೈತ್ರಿ ವಿಚಾರವನ್ನು ಸ್ಪಷ್ಟಪಡಿಸಿದರು. ದೇಶದ ವಿವಿಧ ರಾಜ್ಯಗಳಲ್ಲಿ ಹಲವಾರು ಪಕ್ಷಗಳು ಬಿ.ಎಸ್.ಪಿ.ಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿವೆ ಆದರೆ ನಮ್ಮ ಪಕ್ಷವು ಚುನಾವಣಾ ಲಾಭಕ್ಕಾಗಿ ಸಿದ್ಧಾಂತಗಳನ್ನು ಬಲಿಕೊಡಲು ಸಿದ್ಧವಿಲ್ಲ ಎಂಬುದನ್ನು ಮಾಯಾವತಿಯವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ