ಕಣದಿಂದ ಹಿಂದೆ ಸರಿದ ಬಿಎಸ್ಪಿ ಅಭ್ಯರ್ಥಿ: ಕಾಂಗ್ರೆಸ್ ಗೆ ಮಾಯಾವತಿ ಎಚ್ಚರಿಕೆ!
Team Udayavani, Apr 30, 2019, 4:58 PM IST
ನವದೆಹಲಿ: ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲದ ಬಗ್ಗೆ ಪುನರ್ ಪರಿಶೀಲಿಸಬೇಕಾಗುತ್ತದೆ ಎಂದು ಬಹುಜನ್ ಸಮಾಜ್ ಪಕ್ಷ(ಬಿಎಸ್ಪಿ)ದ ಅಧ್ಯಕ್ಷೆ ಮಾಯಾವತಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಇದಕ್ಕೆ ಕಾರಣವಾಗಿದ್ದು, ಮಧ್ಯಪ್ರದೇಶದ ಗುನಾ ಲೋಕಸಭಾ ಕ್ಷೇತ್ರದ ಸಮಾಜವಾದಿ ಮತ್ತು ಬಿಎಸ್ಪಿ ಪಕ್ಷದ ಮೈತ್ರಿ ಅಭ್ಯರ್ಥಿಯನ್ನಾಗಿ ಲೋಕೇಂದ್ರ ಸಿಂಗ್ ರಾಜ್ ಪುತ್ ಅವರನ್ನು ಕಣಕ್ಕಿಳಿಸಿತ್ತು. ಏತನ್ಮಧ್ಯೆ ಸೋಮವಾರ ಲೋಕೇಂದ್ರ ಬಿಎಸ್ಪಿ ಪಕ್ಷ ತೊರೆದು, ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಬೆಂಬಲಿಸುವುದಾಗಿ ಹೇಳಿಕೆ ನೀಡಿದ್ದು!
ಲೋಕೇಂದ್ರ ಸಿಂಗ್ ಹೂಮಾಲೆಯನ್ನು ಧರಿಸಿ, ಜ್ಯೋತಿರಾದಿತ್ಯ ಸಿಂಧ್ಯಾ ಅವರ ಜೊತೆ ಕಾಣಿಸಿಕೊಂಡಿರುವ ವಿಡಿಯೋ ಕ್ಲಿಪ್ಸ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಯುವ ಅಭ್ಯರ್ಥಿ ಲೋಕೇಂದ್ರ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರೆ. ಅಲ್ಲದೇ ತಮ್ಮ ಬೆಂಬಲವನ್ನು ತನಗೆ ನೀಡಿದ್ದು, ನಾವು ಅವರನ್ನು ಕಾಂಗ್ರೆಸ್ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇವೆ ಎಂದು ಸಿಂಧ್ಯಾ ಟ್ವೀಟ್ ಮಾಡಿದ್ದರು. ಇದಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಮಾಯಾವತಿ, ಮಧ್ಯಪ್ರದೇಶದಲ್ಲಿನ ಅಲ್ಪ ಬಹುಮತದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲದ ಬಗ್ಗೆ ಪುನರ್ ಪರಿಶೀಲಿಸಬೇಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ