ವಿದ್ಯಾರ್ಥಿಗಳಿಂದ ಸ್ಮಾರಕ, ಹುತಾತ್ಮರ ಮನೆಗಳಿಗೆ ಭೇಟಿ
Team Udayavani, Aug 9, 2017, 6:35 AM IST
ಹೊಸದಿಲ್ಲಿ: 70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹುತಾತ್ಮರು ದೇಶಕ್ಕಾಗಿ ನೀಡಿದ ತ್ಯಾಗ, ಬಲಿದಾನಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ದೇಶದ ಎಲ್ಲ ವಿಶ್ವವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳು ಮತ್ತು ಹುತಾತ್ಮರ ಮನೆಗಳಿಗೆ ಪ್ರವಾಸ ಕರೆದೊಯ್ಯುವಂತೆ ಕೇಂದ್ರ ಆದೇಶಿಸಿದೆ.
ಇದೇ ವೇಳೆ ಬುಧವಾರ (ಆ.9) “ಕ್ವಿಟ್ ಇಂಡಿಯಾ ಚಳವಳಿ’ಗೆ 75 ವರ್ಷ ತುಂಬಲಿದ್ದು, ಬೆಳಗ್ಗೆ 9.30ಕ್ಕೆ ಎಲ್ಲ ವಿವಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಬೋಧಕೇತರ ಸಿಬಂದಿ, “ನಾವು ಭಯೋತ್ಪಾದನೆ ಮುಕ್ತ, ಜಾತಿ ಮುಕ್ತ, ಭ್ರಷ್ಟಾಚಾರ ಮುಕ್ತ, ಕೊಳಕು ಮುಕ್ತ ಹಾಗೂ ಬಡತನ ಮುಕ್ತ ಭಾರತ ನಿರ್ಮಾಣ ಮಾಡುತ್ತೇವೆ’ ಎಂದು ಪ್ರಮಾಣ ಸ್ವೀಕರಿಸುವಂತೆಯೂ ಕೇಂದ್ರ ಸೂಚಿಸಿದೆ.
“ಸ್ವಾತಂತ್ರ್ಯ ಹೋರಾಟಗಾರರು, ಸೇನೆ, ಅರೆಸೇನೆ ಮತ್ತು ಪೊಲೀಸ್ ಪಡೆಗಳ ಹುತಾತ್ಮರ ತ್ಯಾಗ, ಬಲಿದಾನದ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ದೇಶದಲ್ಲಿನ ವಿವಿಧ ಸ್ಮಾರಕಗಳು, ಹುತಾತ್ಮರ ಮನೆ ಮತ್ತಿತರ ಪ್ರದೇಶಗಳಿಗೆ ಮಾಹಿತಿಯುಕ್ತ ಪ್ರವಾಸ ಆಯೋ ಜಿಸಬೇಕು’ ಎಂದು ಸೂಚಿಸಿ ಯುಜಿಸಿ ಕಾರ್ಯ ದರ್ಶಿ ಜೆ.ಎಸ್.ಸಂಧು, ಎಲ್ಲ ವಿಶ್ವ ವಿದ್ಯಾಲಯಗಳ ಕುಲಪತಿಗಳಿಗೆ ಪತ್ರ ಬರೆದಿ ದ್ದಾರೆ. ಹಾಗೇ ಪ್ರಧಾನಿ ಮೋದಿ ಯವರ ಆಶಯದಂತೆ ದೇಶವನ್ನು ಎಲ್ಲ ಸಮಸ್ಯೆಗಳಿಂದ ಮುಕ್ತಗೊಳಿಸಲು ಪ್ರತಿಜ್ಞೆ ಸ್ವೀಕರಿಸು ವಂತೆಯೂ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ