ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ‹ದಿಂದ ಶೀಘ್ರ ಕ್ರಮ
Team Udayavani, May 23, 2018, 6:00 AM IST
ಮುಂಬೈ/ನವದೆಹಲಿ: ಕರ್ನಾಟಕ ಫಲಿತಾಂಶದ ಬಳಿಕ ಗಗನಮುಖಿಯಾಗಿರುವ ಪೆಟ್ರೋಲ್, ಡೀಸೆಲ್ ದರದ ಮೇಲೆ ನಿಯಂತ್ರಣ ಹೇರುವ ಬಗ್ಗೆ ಕೇಂದ್ರ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನವದೆಹಲಿಯಲ್ಲಿ ಮಂಗಳವಾರ ಹಿರಿಯ ಅಧಿಕಾರಿಯೊಬ್ಬರು ಹೇಳಿದ ಪ್ರಕಾರ ಎಕ್ಸೆ„ಸ್ ಡ್ನೂಟಿ (ಅಬಕಾರಿ ಸುಂಕ) ತಗ್ಗಿಸುವುದರಿಂದ ಕೇವಲ ನಾಲ್ಕನೇ ಒಂದಂಶದಷ್ಟು ಮಾತ್ರ ದರ ತಗ್ಗಿಸಿದಂತಾಗುತ್ತದೆ. ಇತರ ಕ್ರಮವೂ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ. ಕೇಂದ್ರ ಹಣಕಾಸು ಖಾತೆ ಸಚಿವಾಲಯ ಪೆಟ್ರೋಲಿಯಂ ಸಚಿವಾಲಯದ ಜತೆಗೆ ಮಾತುಕತೆ ನಡೆಸುತ್ತಿದೆ ಎಂದೂ ಅವರು ಹೇಳಿದ್ದಾರೆ.
ಇಂದು ಸಭೆ?: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮಾತನಾಡಿ, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಬುಧವಾರ ಅಧಿಕಾರಿಗಳ ಜತೆಗೆ ಸಭೆ ನಡೆಸಿ, ಕ್ರಮ ಕೈಗೊಳ್ಳಲಿದ್ದಾರೆ. ಏರಿಕೆಯಾಗಿರುವ ದರಗಳು ತಗ್ಗಲಿವೆ ಎಂದಿದ್ದಾರೆ.
ಚುನಾವಣೆಗಾಗಿ ಅಲ್ಲ: ಕರ್ನಾಟಕ ಚುನಾವಣೆಗಾಗಿ ಕೇಂದ್ರ ಸರ್ಕಾರ ತೈಲ ಕಂಪನಿಗಳಿಗೆ ದರ ಪರಿಷ್ಕರಿಸದಂತೆ ಸೂಚಿಸಿಯೇ ಇಲ್ಲ. ಅಂತಾ ರಾಷ್ಟ್ರೀಯವಾಗಿ ಹೆಚ್ಚಾಗಿರುವ ಕಚ್ಚಾ ತೈಲದ ಬೆಲೆ ತಗ್ಗಲಿ ಎಂದು ಆಂತರಿಕವಾಗಿಯೇ ದರ ಹೆಚ್ಚಿಸದಂತೆ ನಿರ್ಧಾರ ಕೈಗೊಂಡಿದ್ದೆವು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಓಸಿ) ಅಧ್ಯಕ್ಷ ಸಂಜೀವ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ