ಕಾಂಗ್ರೆಸ್ ಗೆ ಆಘಾತ: ಮಾಜಿ ಸಿಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ!
Team Udayavani, Nov 25, 2021, 8:41 AM IST
ಶಿಲ್ಲಾಂಗ್: ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು 11 ಮಂದಿ ಶಾಸಕರು ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್ಗೆ ಭಾರೀ ಆಘಾತವಾಗಿದೆ. ಈ ನಡೆಯೊಂದಿಗೆ 17 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ತೃಣಮೂಲಕ್ಕೆ ಸೇರ್ಪಡೆಯಾಗಿದ್ದಾರೆ.
ರಾಹುಲ್ ಗಾಂಧಿ ಅವರು ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿನ್ಸೆಂಟ್ ಎಚ್ ಪಾಲಾ ಅವರನ್ನು ತಮ್ಮ ಬೇಡಿಕೆಗಳ ಕುರಿತು ಭೇಟಿಯಾದ ಒಂದು ತಿಂಗಳ ನಂತರ ಈ ಪ್ರಸಂಗ ನಡೆದಿದೆ.
ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ವಿನ್ಸೆಂಟ್ ಹೆಚ್ ಪಾಲಾ ಅವರು ಮೇಘಾಲಯ ಘಟಕದ ಹೊಸ ಮುಖ್ಯಸ್ಥರಾಗಿ ನೇಮಕಗೊಂಡಾಗಿನಿಂದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಕುಲ್ ಎಂ ಸಂಗ್ಮಾ ನಡುವೆ ಬಿರುಕು ಮೂಡಿತ್ತು.
ಇದನ್ನೂ ಓದಿ:ಇನ್ನೆರಡು ಬ್ಯಾಂಕ್ ಖಾಸಗಿಗೆ? ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ
ಪಾಲಾ ಅವರ ನೇಮಕದ ಬಗ್ಗೆ ಪಕ್ಷದ ನಾಯಕತ್ವವು ತನ್ನನ್ನು ಸಂಪರ್ಕಿಸಿಲ್ಲ ಎಂದು ಸಂಗ್ಮಾ ಹೇಳಿದ್ದರು. ಸಂಗ್ಮಾ ತೃಣಮೂಲ ಕಾಂಗ್ರೆಸ್ಗೆ ಪಕ್ಷಾಂತರ ಮಾಡಬಹುದು ಎಂಬ ಊಹಾಪೋಹವಿತ್ತು. ಆದಾಗ್ಯೂ, ಉಭಯ ನಾಯಕರು ಶನಿವಾರ ಒಟ್ಟಿಗೆ ಬಂದು ಮುಂಬರುವ ಉಪಚುನಾವಣೆಗೆ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದರು.
ಟಿಎಂಸಿ ಪರವಾಗಿ ಪ್ರಶಾಂತ್ ಕಿಶೋರ್ ಅವರ ತಂಡದ ಸದಸ್ಯರು ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ