ಆಡ್ವಾಣಿ ಬ್ಲಾಗಿಗೆ ಮೆಹಬೂಬ ಪ್ರತಿಕ್ರಿಯೆ: 5 ವರ್ಷದಲ್ಲಿ ಒಮ್ಮೆಯಾದರೂ ಇದನ್ನು ಹೇಳಬೇಕಿತ್ತು


Team Udayavani, Apr 5, 2019, 11:22 AM IST

Mehbooba-Mufti-730

ಶ್ರೀನಗರ : ದೇಶ ಮೊದಲು, ಪಕ್ಷ  ಅನಂತರ, ನಾವು ಕೊನೆಗೆ’ ಎಂಬ ಶೀರ್ಷಿಕೆಯಡಿ ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಆಡ್ವಾಣಿ ಬರೆದಿರುವ ಬ್ಲಾಗ್‌ ಗೆ ಪ್ರತಿಕ್ರಿಯಿಸಿರುವ ಪಿಡಿಪಿ ಮುಖ್ಯಸ್ಥೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು, “ಆಡ್ವಾಣಿ ಈ ಮಾತನ್ನು ಕಳೆದ ಐದು ವರ್ಷಗಳಲ್ಲಿ ಒಮ್ಮೆಯಾದರೂ ಹೇಳಬೇಕಿತ್ತು” ಎಂದು ಪ್ರತಿಕ್ರಿಯಿಸಿದ್ದಾರೆ.

ಆಡ್ವಾಣಿ ಅವರ ಮನದಾಳದ ಮಾತಿಗೆ ಆಶ್ಚರ್ಯ ವ್ಯಕ್ತಪಡಿಸಿರುವ ಮೆಹಬೂಬ, “ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಈ ವರೆಗೂ ಆಡ್ವಾಣಿ ಒಂದೇ ಒಂದು ಶಬ್ದ ಉಚ್ಚರಿಸಿದಿರುವುದು ಅತ್ಯಂತ ಅಚ್ಚರಿಯ ಸಂಗತಿ’ ಎಂದು ಹೇಳಿದ್ದಾರೆ.

‘ಬಿಜೆಪಿ ಸ್ಥಾಪನೆಗೊಂಡಂದಿನಿಂದಲೂ ಎಂದೂ ಕೂಡ ನಮ್ಮನ್ನು ರಾಜಕೀಯವಾಗಿ ಒಪ್ಪದವರನ್ನು ನಾವು ಶತ್ರುಗಳೆಂದು ಕಂಡದ್ದಿಲ್ಲ; ಅಂಥವರನ್ನು ಪಕ್ಷ ಕೇವಲ ರಾಜಕೀಯ ವಿರೋಧಿಗಳು,ಟೀಕಾಕಾರರು ಎಂದು ಪರಿಗಣಿಸಿಕೊಂಡು ಬಂದಿದೆ’ ಎಂದು ಆಡ್ವಾಣಿ ಅವರು ತಮ್ಮ ಬ್ಲಾಗ್‌ನಲ್ಲಿ ರಾಜಕೀಯ ಸಹಿಷ್ಣುತೆ ಕುರಿತಾದ ಪಕ್ಷದ ನೀತಿಯನ್ನು ಸ್ಪಷ್ಟಪಡಿಸಿದ್ದಾರೆ.

ವಿಶೇಷವೆಂದರೆ ಆಡ್ವಾಣಿ ಅವರು ತಮ್ಮ ಬ್ಲಾಗನ್ನು ಬಿಜೆಪಿಯ ಸ್ಥಾಪನಾ ದಿನಾಚರಣೆಗೆ ಕೇವಲ ಎರಡು ದಿನಗಳಿರುವಾಗ ಮತ್ತು high voltage ಲೋಕಸಭಾ ಚುನಾವಣೆಗೆ ಒಂದು ವಾರ ಇರುವಾಗ ಬರೆದಿರುವುದು ಗಮನಾರ್ಹವಾಗಿದೆ.

ಆಡ್ವಾಣಿ ಬ್ಲಾಗ್‌ ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಮೆಹಬೂಬ ಹೀಗೆ ಬರೆದಿದ್ದಾರೆ :

ಬಿಜೆಪಿಯ ಪ್ರಕೃತ ವರಿಷ್ಠ ನಾಯಕತ್ವ ಇಡಿಯ ವಿರೋಧ ಪಕ್ಷವನ್ನು ರಾಷ್ಟ್ರ ವಿರೋಧಿ ಎಂದು ಕರೆಯುವುದರ ಬಗ್ಗೆ ಆಡ್ವಾಣಿ ಅಚ್ಚರಿ ವ್ಯಕ್ತಪಡಿಸಿರುವುದು ಆಶ್ಚರ್ಯಕರ. 2014ರಿಂದ ಈ ತನಕವೂ ಆಡ್ವಾಣಿ ಒಂದೇ ಒಂದು ಶಬ್ದವನ್ನು ಉಚ್ಚರಿಸಿಲ್ಲ. ಆದರೆ ಈಗ ಬಿಜೆಪಿ ಅದಿಕಾರಾವಧಿ ಕೇಂದ್ರದಲ್ಲಿ ಮುಗಿಯುತ್ತ ಬಂದಿರುವ ಈ ಸಂದರ್ಭದಲ್ಲಿ ಅವರು ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾತುಗಳನ್ನು ಕಳೆದ ಐದು ವರ್ಷಗಳಲ್ಲಿ ಹೇಳಬಹುದಿತ್ತು ಎಂದು ನಾನು ಭಾವಿಸುತ್ತೇನೆ; ಬಡೀ ದೇರ್‌ ಕರ್‌ ದೀ ಮೆಹರ್‌ಬಾನ್‌ ಆತೇ ಆತೇ’.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.