ಭಾರತ ಮುಸ್ಲಿಮರ…:ಪೌರತ್ವ ತಿದ್ದುಪಡಿ ಮಸೂದೆ-ಮುಫ್ತಿ ಪುತ್ರಿಯ ಟ್ವೀಟ್ ನಲ್ಲೇನಿದೆ?
Team Udayavani, Dec 4, 2019, 7:16 PM IST
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ, ದೇಶದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಯಾವುದೇ ಆದ್ಯತೆ ಇಲ್ಲ ಎಂಬುದಾಗಿ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಪುತ್ರಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಭಾರತ ಮುಸ್ಲಿಮರ ದೇಶವಲ್ಲ ಎಂಬ ಪೋಸ್ಟ್ ಅನ್ನು ಪಿಡಿಪಿ ಮುಖ್ಯಸ್ಥೆಯ ಟ್ವೀಟರ್ ನಲ್ಲಿ ಟ್ವೀಟ್ ಮಾಡಿರುವುದಾಗಿ ವರದಿ ತಿಳಿಸಿದೆ. ಆಗಸ್ಟ್ 5ರಿಂದ ಮೆಹಬೂಬ ಮುಫ್ತಿಯನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಕೆಯ ಪುತ್ರಿ ಸನಾ ಇಲ್ಟಿಜಿಯ ಜಾವೇದ್ ತಾಯಿಯ ಟ್ವೀಟರ್ ಖಾತೆಯಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರದ ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ನಾಗರಿಕರಿಗೆ ಪೌರತ್ವ ನೀಡಲು ಮುಂದಾಗಿದೆ. ಆದರೆ ಅದರಲ್ಲಿ ಮುಸ್ಲಿಮರನ್ನು ಹೊರಗಿಡಲಾಗಿದೆ ಎಂದು ವಿಪಕ್ಷಗಳು ದೂರಿವೆ.
ಏತನ್ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸಮರ್ಥಿಸಿಕೊಂಡಿದ್ದು, ಸುತ್ತಮುತ್ತಲಿನ ನೆರೆಯ ದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ನೆರವು ನೀಡಬೇಕಾಗಿರುವುದು ನಮ್ಮ ಹೊಣೆಗಾರಿಕೆ ಎಂದು ಹೇಳಿದೆ.
ಇದೇ ಮೊದಲ ಬಾರಿಗೆ ಮೆಹಬೂಬ ಅಥವಾ ಆಕೆಯ ಮಗಳು ಕೇಂದ್ರ ಸರ್ಕಾರವನ್ನು ದೂರಿದ್ದು, ಬಿಜೆಪಿ ನೇತೃತ್ವದ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಭಾರತದಲ್ಲಿರುವ ಮುಸ್ಲಿಮ್ ಸಂಖ್ಯಾಬಾಹುಳ್ಯದ ರಾಜ್ಯದ ಭೌಗೋಳಿಕತೆಯನ್ನು ಬದಲಾಯಿಸಲು ಹೊರಟಿದೆ. ಈ ಮೂಲಕ ತಮ್ಮದೇ ರಾಜ್ಯದಲ್ಲಿ ಮುಸ್ಲಿಮರು ಎರಡನೇ ದರ್ಜೆಯ ನಾಗರಿಕರಾಗಬೇಕು ಎಂದು ಕೇಂದ್ರ ಬಯಸಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ