ಭಾರತದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಆ್ಯಂಟಿಗುವಾದಿಂದಲೂ ನಾಪತ್ತೆ!
Team Udayavani, May 25, 2021, 8:40 AM IST
ಹೊಸದಿಲ್ಲಿ: ಭಾರತದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಇದೀಗ ಆ್ಯಂಟಿಗುವಾ ಮತ್ತು ಬಾರ್ಬೊಡಾದಿಂದಲೂ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಈ ಬಗ್ಗೆ ಮೆಹುಲ್ ಚೋಕ್ಸಿ ವಕೀಲ ವಿಜಯ್ ಅಗರ್ವಾಲ್ ಅವರೇ ಖಚಿತ ಪಡಿಸಿದ್ದಾರೆ.
ವಜ್ರದ ವ್ಯಾಪಾರಿಯಾಗಿದ್ದ ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚಿಸಿ ಪರಾರಿಯಾಗಿದ್ದಾನೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ( ಇ.ಡಿ) ಗಳೂ ಈತನಿಗಾಗಿ ಹುಡುಕಾಟ ನಡೆಸುತ್ತಿವೆ.
ಈ ಕುರಿತಂತೆ ಸ್ಥಳೀಯ ಪೊಲೀಸರು ಕೂಡ ಚೋಕ್ಸಿ ಕಾಣೆಯಾಗಿರುವ ಕುರಿತು ದೃಢಪಡಿಸಿದ್ದು, ಚೋಕ್ಸಿಯನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ತಿಳಿಸಿದ್ದಾರೆ.
ಇದನ್ನೂ ಓದಿ:ಭಾರೀ ವೇಗದಲ್ಲಿ ಅಪ್ಪಳಿಸಲಿದೆ ಯಾಸ್ ಚಂಡಮಾರುತ: ಪ.ಬಂಗಾಳ, ಒರಿಸ್ಸಾದಲ್ಲಿ ಕಟ್ಟೆಚ್ಚರ
ಕೆರಿಬಿಯನ್ ರಾಷ್ಟ್ರ ಆ್ಯಂಟಿಗುವಾದ ಪೌರತ್ವ ಪಡೆದಿರುವ ಮೆಹುಲ್ ಚೋಕ್ಸಿ ಇದೀಗ ನಾಪತ್ತೆಯಾಗಿದ್ದಾರೆ. ಆತನ ಕುಟುಂಬ ಮತ್ತು ಸ್ಥಳೀಯ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ವಕೀಲ ವಿಜಯ್ ಅಗರ್ವಾಲ್ ಹೇಳಿದ್ದಾರೆ.
ಮೆಹುಲ್ ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ಪ್ರಸಿದ್ಧ ರೆಸ್ಟೋರೆಂಟ್ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟಿದ್ದ. ಆದರೆ ಮತ್ತೆ ಕಾಣಿಸಲಿಲ್ಲ. ಅವರ ವಾಹನವನ್ನು ಸಂಜೆ ಜಾಲಿ ಹಾರ್ಬರ್ನಲ್ಲಿ ಪತ್ತೆ ಮಾಡಲಾಗಿದೆ. ಆದರೆ ಚೋಕ್ಸಿ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಆಂಟಿಗುವಾನ್ ಸುದ್ದಿ ವಾಹಿನಿಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ