ಮೆಹುಲ್ ಚೋಕ್ಸಿ ಭಾರತಕ್ಕೆ ಗಡಿಪಾರು ಸದ್ಯಕ್ಕೆ ಕಷ್ಟ; ಕಾರಣ ಏನು ಗೊತ್ತಾ?
Team Udayavani, Jun 4, 2021, 8:42 AM IST
ಹೊಸದಿಲ್ಲಿ: ಭಾರತದಲ್ಲಿ ಸಾವಿರಾರು ಕೋಟಿ ರೂಪಾಯಿ ವಂಚನೆ ನಡೆಸಿ ಪರಾರಿಯಾಗಿ ಸದ್ಯ ಡೊಮಿನಿಕಾ ಪೊಲೀಸರ ಅತಿಥಿಯಾಗಿರುವ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಸಾಕಷ್ಟು ಪ್ರಯತ್ನಗಳು ನಡೆಯತ್ತಿದೆ. ಆದರೆ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಕನಿಷ್ಠ ಒಂದು ತಿಂಗಳಾದರೂ ಹಿಡಿಯಬಹುದು ಎನ್ನುತ್ತದೆ ವರದಿಗಳು.
ಭಾರತದಿಂದ ಪರಾರಿಯಾಗಿ ಆ್ಯಂಟಿಗಾ ಮತ್ತು ಬರ್ಬುಡಾ ದೇಶದಲ್ಲಿ ನೆಲೆಸಿದ್ದ ಚೋಕ್ಸಿ, ಅಲ್ಲಿಂದ ನಾಪತ್ತೆಯಾಗಿದ್ದ. ನಂತರ ಕೆಲ ದಿನಗಳ ಬಳಿಕ ಡೊಮಿನಿಕಾ ಪೊಲೀಸರು ಚೋಕ್ಸಿಯನ್ನು ಬಂಧಿಸಿದ್ದರು. ಇದೀಗ ಚೋಕ್ಸಿ ಡೊಮಿನಿಕಾ ಪೊಲೀಸರ ಅತಿಥಿಯಾಗಿದ್ದಾನೆ.
ಸದ್ಯ ಚೋಕ್ಸಿ ವಿರುದ್ಧ ಡೊಮಿನಿಕಾದ ಎರಡು ನ್ಯಾಯಾಲಯಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಡೊಮಿನಿಕಾ ಪೊಲೀಸರು ತನ್ನನ್ನು ಕಾನೂನಿಗೆ ವಿರುದ್ಧವಾಗಿ ಬಂಧಿಸಿದ್ದಾರೆ. ತನ್ನನ್ನು ಆ್ಯಂಟಿಗಾ ಗೆ ಕಳುಹಿಸಬೇಕು ಎಂದು ಚೋಕ್ಸಿ ಡೊಮಿನಿಕಾ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ಡೊಮಿನಿಕಾದ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಚೋಕ್ಸಿ ವಿರುದ್ದ ದೇಶದೊಳಗೆ ಅಕ್ರಮ ಪ್ರವೇಶದಡಿ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಮತ್ತೆ ಸಂಪುಟಕ್ಕೆ? ತೆರೆಮರೆಯಲ್ಲಿ ಕಸರತ್ತು ಆರಂಭ
ಇಂಡಿಯಾ ಟುಡೇ ವರದಿ ಮಾಡಿರುವಂತೆ, ಈ ಎರಡೂ ಪ್ರಕರಣಗಳು ಇತ್ಯರ್ಥವಾಗದ ಹೊರತು ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಸಾಧ್ಯವಿಲ್ಲ.
ಚೋಕ್ಸಿ ಪ್ರಕರಣದ ವಿಚಾರಣೆಯನ್ನು ಡೊಮಿನಿಕಾ ಹೈಕೋರ್ಟ್ ಮುಂದೂಡಿದೆ. ಮುಂದಿನ ವಿಚಾರಣೆಯ ದಿನಾಂಕವನ್ನು ಇದುವರೆಗೆ ತಿಳಿಸಲಾಗಿಲ್ಲ. ಆದರೆ ಮೂಲಗಳ ಪ್ರಕಾರ ಈ ವಿಚಾರಣೆ ಜುಲೈ 1ಕ್ಕೆ ನಡೆಯುವ ಸಾಧ್ಯತೆ ಹೆಚ್ಚಿದೆ.
ಚೋಕ್ಸಿ ಗಡಿಪಾರನ್ನು ಮತ್ತಷ್ಟು ಮುಂದೂಡಲು ಆತನ ಪರ ವಕೀಲರು, ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯೂ ಇದೆ. ಇದರ ವಿಚಾರಣೆ ನಡೆದಷ್ಟು ದಿನಗಳ ಕಾಲ ಗಡಿಪಾಲು ಪ್ರಕ್ರಿಯೆ ವಿಳಂಬವಾಗುತ್ತದೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ