ಮಾಲಿನ್ಯ ಮುಕ್ತ ಆರಾಮದಾಯಕ ದೂರ ಪ್ರಯಾಣ ಈಗ ನನಸು…

ಪುಣೆ ಮತ್ತು ಮುಂಬೈ ನಡುವೆ ಎಲೆಕ್ಟ್ರಿಕ್ ಬಸ್ ಸಂಚಾರ

Team Udayavani, Oct 13, 2021, 10:23 PM IST

ಮಾಲಿನ್ಯಮುಕ್ತ ಆರಾಮದಾಯಕ ದೂರ ಪ್ರಯಾಣ ಈಗ ನನಸು…

ಪುಣೆ: ದೇಶದ ಪ್ರಮುಖ ಎಲೆಕ್ಟ್ರಿಕ್ ಬಸ್ ಸಂಸ್ಥೆ ಮತ್ತು ಎಂಇಐಎಲ್‌ನ ಅಂಗ ಸಂಸ್ಥೆ ಈವಿ ​ಟ್ರಾನ್ಸ್​ ಪ್ರೈವೇಟ್ ಲಿಮಿಟೆಡ್​ ದೇಶದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ “ಪುರಿ ಬಸ್” ಹೆಸರಿನಲ್ಲಿ ಮುಂಬೈ ಮತ್ತು ಪುಣೆ ನಡುವೆ ಅಂತರ ನಗರ ನಡುವಿನ ಎಲೆಕ್ಟ್ರಿಕ್ ಬಸ್ ಸೇವೆಗಳನ್ನು ಆರಂಭಿಸಿದೆ.

ಇದರಿಂದ ಶಬ್ದ ಮತ್ತು ಪರಿಸರ ಮಾಲಿನ್ಯ ಮುಕ್ತ ಜತೆಗೆ ಆರಾಮದಾಯಕ ದೂರದ ಪ್ರಯಾಣ ನನಸಾಗಿದ್ದು, ವಿಜಯದಶಮಿಯಂತಹ ಸುದಿನದಿಂದ ಈ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

“ಪುಣೆಯಲ್ಲಿ ಅಂತರ್ ನಗರ ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸುತ್ತಿರುವುದು ಸಂತಸ ತಂದಿದೆ” ಎಂದು ಇದೇ ವೇಳೆ ಪ್ರತಿಕ್ರಿಯಿಸಿದ ಈವಿ ಟ್ರಾನ್ಸ್​​ನ ​ ಕಾರ್ಯಕಾರಿ ವ್ಯವಸ್ಥಾಪಕ ಸಂದೀಪ್ ರೈಜಾದ, “ಪುರಿ ಬಸ್‌ಗಳು ಒಮ್ಮೆಯ ಚಾರ್ಜಿಂಗ್ ನಂತರ ಮಾಲಿನ್ಯ ರಹಿತವಾಗಿ 350 ಕಿ.ಮೀ. ಸಂಚರಿಸಲಿದ್ದು, ಇದರಿಂದ ಅಂತರ್ ನಗರ ಸಂಚಾರ ಸೇವೆ ಸಾಧ್ಯವಾಗಿದೆ. ಇದರಿಂದ ಸಾಕಷ್ಟು ಉಳಿತಾಯ ಆಗಲಿದೆ” ಎಂದು ತಿಳಿಸಿದರು.

12 ಮೀಟರ್ ಉದ್ದದ ಪುರಿ ಬಸ್:
ಈ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕೋಚ್ ಬಸ್‌ಗಳು 45 ಮಂದಿ ಸಾರ್ವಜನಿಕರು ಮತ್ತು ಓರ್ವ ಚಾಲಕ ಮತ್ತೋರ್ವ ಸಹ ಚಾಲಕನನ್ನು ಹೊತ್ತೋಯ್ಯುವ ಸಾಮರ್ಥ್ಯ ಹೊಂದಿದ್ದು, ದೂರದ ಪ್ರಯಾಣ ಆರಾಮದಾಯಕವಾಗಿಸುವ ಸಲುವಾಗಿ ಈ ಬಸ್‌ಗಳು ಹವಾನಿಯಂತ್ರಣ ವ್ಯವಸ್ಥೆ ಜತೆಗೆ ಪುಷ್ ಬ್ಯಾಕ್ ಆಸನಗಳನ್ನು ಹೊಂದಿದ್ದು ಆ ಮೂಲಕ ಪ್ರಯಾಣವನ್ನು ಸುಖಕರವಾಗಿಸಲಿವೆ.

ಹೈಟೆಕ್ ತಂತ್ರಜ್ಞಾನ ಅಳವಡಿಕೆ:
ಇಂದಿನ ಅಗತ್ಯತೆಗೆ ತಕ್ಕಂತೆ ವಿನ್ಯಾಸಗೊಂಡಿರುವ ಈವೀ ಟ್ರಾನ್ಸ್ ಎಲೆಕ್ಟ್ರಿಕ್ ಕೋಚ್ ಬಸ್‌ಗಳಲ್ಲಿ ಟೆಲಿವಿಷನ್ ಮತ್ತು ಮಾಹಿತಿ ವ್ಯವಸ್ಥೆ ಇದ್ದು, ಜತೆಗೆ ಪ್ರತಿ ಅಸನದಲ್ಲಿ ಯುಎಸ್‌ಬಿ ಎಲೆಕ್ಟ್ರಿಕಲ್ ಚಾರ್ಜಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ. ಐದು ಕ್ಯೂಬಿಕ್ ಮೀಟರ್‌ನಷ್ಟು ಸರಂಜಾಮು ಇರಿಸಿಕೊಳ್ಳಲು ಸ್ಥಳಾವಕಾಶ ಒದಗಿಸಲಾಗಿದೆ.

ಇದನ್ನೂ ಓದಿ:500 ಕೆ.ಜಿ.ಚಿನ್ನ ಈಗಲೇ ಕರಗಿಸಿದ್ದೇವೆ: ಮದ್ರಾಸ್‌ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರ ಮಾಹಿತಿ

ಅಗ್ಗದ ಪ್ರಯಾಣ:
ಪ್ರಸ್ತುತ ದೂರದ ಪ್ರಯಾಣಕ್ಕೆ ಬಳಕೆಯಲ್ಲಿರುವ ಡೀಸೆಲ್ ವಾಹನಗಳಿಗೆ ಹೋಲಿಕೆ ಮಾಡಿದಲ್ಲಿ ಈವೀ ಟ್ರಾನ್ಸ್ ಎಲೆಕ್ಟ್ರಿಕ್ ಕೋಚ್ ಬಸ್‌ಗಳು ಅಗ್ಗದ ಪ್ರಯಾಣಕ್ಕೆ ನಾಂದಿ ಹಾಡಿದ್ದು, ಸಂಚಾರ ಮತ್ತು ನಿರ್ವಹಣೆಯಲ್ಲಿ ಮಿತವ್ಯಯಿ ಎನಿಸಿಕೊಂಡಿದೆ. ಲಿಯಾನ್ ಪಾಸ್ಪೇಟ್ ತಂತ್ರಜ್ಞಾನ ಅಳವಡಿತ ಬ್ಯಾಟರಿಯ ಈವೀ ಟ್ರಾನ್ಸ್ ಬಸ್‌ಗಳನ್ನು ಭಾರತದಲ್ಲಿ ಒಲೆಕ್ಟ್ರಾ ಗ್ರೀನ್ ಟೆಕ್ ಲಿಮಿಟೆಡ್ ತಯಾರಿಸುತ್ತಿದೆ.

ಕೋಚ್ ಬಸ್‌ಗಳ ತಯಾರಿ ವೇಳೆ ಸುರಕ್ಷತೆಯನ್ನು ಆದ್ಯತೆಯಾಗಿಸಿಕೊಂಡಿದ್ದು, ಇ.ಯು. ಗುಣಮಟ್ಟಕ್ಕೆ ತಕ್ಕಂತೆ ಚಾಲಕ ಸ್ನೇಹಿ ವ್ಯವಸ್ಥೆ ಹೊಂದಿದೆ ಮತ್ತು ಭಾರತೀಯ ನಿಯಂತ್ರಣ ನಿಯಮಾನುಸಾರ ಈವೀ ಟ್ರಾನ್ಸ್ ಬಸ್‌ಗಳು ಸಿದ್ಧಗೊಂಡಿದ್ದು, ಆತಂಕದ ವೇಳೆ ಅಲಾರಾಮ್ ವ್ಯವಸ್ಥೆ, ತುರ್ತು ದೀಪಗಳ ವ್ಯವಸ್ಥೆ ಹೊಂದಿದೆ.

ಈಗಾಗಲೇ ಈವೀ ಟ್ರಾನ್ಸ್ ಕೋಚ್ ಬಸ್‌ಗಳು ಸೂರತ್, ಸಿಲ್ವಾಸಾ, ಗೋವಾ, ಹೈದರಾಬಾದ್, ಡೆಹ್ರಾಡೂನ್ ಗಳಲ್ಲಿ ಯಶಸ್ವಿಯಾಗಿ ಸಂಚರಿಸುತ್ತಿದ್ದು, ಪುರಿ ಬಸ್ ಸೇವೆ ಎಲೆಕ್ಟ್ರಿಕ್ ಬಸ್ ಸೇವೆಗಳ ವಲಯದಲ್ಲಿ ಹೊಸ ಅಧ್ಯಾಯ ಸೃಷ್ಟಿಸಲಿದೆ.

ಎಂಇಐಎಲ್‌ನ ಶೇ.100ರಷ್ಟು ಪಾಲುದಾರಿಕೆಯ ಸಂಸ್ಥೆಯಾಗಿರುವ ಈವೀ ​ಟ್ರಾನ್ಸ್​ ಪ್ರೈವೇಟ್ ಲಿಮಿಟೆಡ್ ಭಾರತದ ಅತಿದೊಡ್ಡ ಎಲೆಕ್ಟ್ರಿಕ್ ಬಸ್ ಸೇವೆ ಒದಗಿಸುವ ಸಂಸ್ಥೆಯಾಗಿದೆ. ಸಂಸ್ಥೆಯು ಮಾರಾಟ, ಗುತ್ತಿಗೆ ಸೇರಿದಂತೆ ವಿವಿಧ ಮಾದರಿಗಳಲ್ಲಿ ಬಸ್ ಸೇವೆಗಳನ್ನು ಒದಗಿಸುತ್ತಿದ್ದು, ಪ್ರಸ್ತುತ ದೇಶಾದ್ಯಂತ 400 ಬಸ್‌ಗಳು ಸಂಚರಿಸುತ್ತಿವೆ. ಈವೀ ಟ್ರಾನ್ಸ್ ತನ್ನದೇ ಆದ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿದೆ.

ಫೇಮ್ 1 ಮತ್ತು ಫೇಮ್ 2 ಯೋಜನೆಯಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಲೆಕ್ಟ್ರಿಕಲ್ ಬಸ್‌ಗಳ ಅಳವಡಿಕೆಗೆ ಮುಂದಡಿ ಇರಿಸಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.