![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪ್ರಧಾನಿಗೆ ಮರ್ಸಿಡಿಸ್ ಕಾರು: ಬೆಲೆ ಸುರಕ್ಷತ ವಿಶ್ಲೇಷಣೆಗೆ ಕೇಂದ್ರದ ಅತೃಪ್ತಿ
Team Udayavani, Dec 30, 2021, 7:10 AM IST
![ಪ್ರಧಾನಿಗೆ ಮರ್ಸಿಡಿಸ್ ಕಾರು: ಬೆಲೆ ಸುರಕ್ಷತ ವಿಶ್ಲೇಷಣೆಗೆ ಕೇಂದ್ರದ ಅತೃಪ್ತಿ](https://www.udayavani.com/wp-content/uploads/2021/12/car-6-620x373.jpg)
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಯವರಿಗೆ ಹೊಸತಾಗಿ ಒದಗಿಸಲಾಗಿರುವ ಮರ್ಸಿಡಿಸ್ ಮೆಬಾಕ್ ಕಾರು ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಅಂಶ ಸತ್ಯಕ್ಕೆ ದೂರವಾದದ್ದು ಎಂದು ಕೇಂದ್ರ ಸರಕಾರ ಬುಧವಾರ ಸ್ಪಷ್ಟನೆ ನೀಡಿದೆ.
ಪ್ರಧಾನಿಯವರು ಬಳಕೆ ಮಾಡುತ್ತಿದ್ದ ಬಿಎಂಡಬ್ಲ್ಯೂ ಕಾರಿನ ಮಾದರಿಯನ್ನು ಸಂಸ್ಥೆ ಈಗ ಸಿದ್ಧಪಡಿಸುತ್ತಿಲ್ಲ. ಹೀಗಾಗಿ, ವಿಶೇಷ ಭದ್ರತಾ ಪಡೆ (ಎಸ್ಪಿಜಿ) ಶಿಫಾರಸಿನ ಅನ್ವಯ ಹೊಸ ಕಾರು ಒದಗಿಸಲಾಗಿದೆ. ಜತೆಗೆ ಕೆಲವು ಮಾಧ್ಯಮಗಳಲ್ಲಿ ಹೊಸ ಕಾರಿನ ಬೆಲೆ 12 ಕೋಟಿ ರೂ. ಎಂದು ಪ್ರಕಟವಾಗಿದೆ. ಅದು ಸರಿಯಾದ ಅಂಶವಲ್ಲ, ಬದಲಾಗಿ ಮೂರನೇ ಒಂದರಷ್ಟು (4 ಕೋಟಿ ರೂ.) ಎಂದು ಕೇಂದ್ರ ಸರಕಾರ ನೀಡಿದ ಸ್ಪಷ್ಟನೆಯಲ್ಲಿ ತಿಳಿಸಿದೆ.
ಪ್ರಧಾನಮಂತ್ರಿ ಪ್ರಯಾಣಿಸುವ ಕಾರುಗಳನ್ನು ಆರು ವರ್ಷಕ್ಕೊಮ್ಮೆ ಬದಲಾವಣೆ ಮಾಡಲಾಗುತ್ತದೆ. ಹಾಲಿ ಪ್ರಧಾನಿ ಅಧಿಕಾರಕ್ಕೆ ಬಂದ ಬಳಿಕ ಎಂಟು ವರ್ಷಗಳ ಕಾಲ ಹಲವು ಕಾರುಗಳನ್ನು ಬಳಕೆ ಮಾಡಲಾಗಿದೆ. ಹೀಗಾಗಿ, ಎಸ್ಪಿಜಿ ಅವುಗಳ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಬಿಎಂಡಬ್ಲ್ಯೂ ಕಾರು ಬಳಕೆ ಮಾಡುವುದಕ್ಕೆ ಆಕ್ಷೇಪ ಮಾಡಿತ್ತು.
ಇದನ್ನೂ ಓದಿ:ಆ್ಯಪಲ್ ಸಂಸ್ಥೆಯಿಂದ ಭರ್ಜರಿ ಬೋನಸ್ !
ಎಸ್ಪಿಜಿ ತಾನು ರಕ್ಷಣೆ ನೀಡುವ ವ್ಯಕ್ತಿಗೆ ಇರುವ ಬೆದರಿಕೆಯ ತೀವ್ರತೆಗೆ ಅನುಗುಣವಾಗಿ ಹೊಸ ಕಾರು ಖರೀದಿ ಮಾಡುವ ಬಗ್ಗೆ ಸ್ವತಂತ್ರವಾಗಿ ನಿರ್ಧರಿಸಿ, ಕ್ರಮ ಕೈಗೊಳ್ಳುತ್ತದೆ ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ. ಜತೆಗೆ ದೇಶದ ಹಿತಾಸಕ್ತಿಯಿಂದ ಪ್ರಧಾನಿಗೆ ನೀಡಲಾಗಿರುವ ಹೊಸ ಕಾರಿನ ಭದ್ರತಾ ವಿವರಗಳ ಬಗ್ಗೆ ಚರ್ಚೆಯಾಗಿರುವುದಕ್ಕೂ ಸರಕಾರ ವಿಷಾದ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.