ಪಂಜಾಬ್ ರೈತರ ದಿಲ್ಲಿ ಚಲೋ: ದೆಹಲಿ ಮೆಟ್ರೋ ರೈಲು ಸೇವೆ ತಾತ್ಕಾಲಿಕ ರದ್ದು
Team Udayavani, Nov 27, 2020, 3:53 PM IST
ನವದೆಹಲಿ: ಕೇಂದ್ರದ ಕೃಷಿ ನೀತಿಗೆ ಸಂಬಂಧಿಸಿದಂತೆ ಪಂಜಾಬ್ ರೈತರು ನಡೆಸುತ್ತಿರುವ ದೆಹಲಿ ಚಳುವಳಿ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿ-ಹರಿಯಾಣ ಗಡಿಭಾಗದ ಮೆಟ್ರೋ ರೈಲು ಸೇವೆಯನ್ನು ರದ್ದುಗೊಳಿಸಲಾಗುವುದಾಗಿ ದೆಹಲಿ ಮೆಟ್ರೋ ರೈಲು ನಿಗಮ ತಿಳಿಸಿದೆ.
ಪಂಜಾಬ್, ಹರಿಯಾಣ ಸೇರಿದಂತೆ ದೇಶದ ನಾನಾ ಭಾಗಗಳಿಂದ ಪ್ರತಿಭಟನಾಕಾರರು ಬೃಹತ್ ಸಂಖ್ಯೆಯಲ್ಲಿ ದೆಹಲಿಯತ್ತ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ಸಲಹೆಯ ಮೇರೆಗೆ ಭದ್ರತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು DMRC ತಿಳಿಸಿದೆ.
ಗ್ರೀನ್ಲೈನ್ನಲ್ಲಿರುವ ಬ್ರಿಗೇಡಿಯರ್ ಹೊಸಿಯಾರ್ ಸಿಂಗ್, ಬಹದ್ದೂರ್ಗಡ್, ಪಂಡಿತ್ ಶ್ರೀ ರಾಮ್ ಶರ್ಮಾ, ಟಿಕ್ರಿ ಬಾರ್ಡರ್, ಟಿಕ್ರಿ ಕಲಾನ್ ಮತ್ತು ಘೆವ್ರಾ ನಿಲ್ದಾಣಗಳನ್ನು ಈಗ ಮುಚ್ಚಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ಟ್ವೀಟ್ ಮಾಡಿದೆ.
ಇದನ್ನೂ ಓದಿ:ಚಳಿಗಾಲಕ್ಕೆ ಟ್ರೆಂಡಿ ಬಟ್ಟೆ
ದೆಹಲಿಯಿಂದ NCR ಕಡೆ ತೆರಳುವ ರೈಲು ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು NCR ಕಡೆಯಿಂದ ದೆಹಲಿ ರೈಲು ಪ್ರಯಾಣವನ್ನು ಮುಂದಿನ ಸೂಚನೆ ಬರುವವರೆಗೂ ರದ್ದುಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಂಪು ವಲಯದ ದಲ್ಶಾದ್ ಗಾರ್ಡನ್ ಮತ್ತು ಮೇಜರ್ ಮೋಹಿತ್ ಶರ್ಮಾ ರಾಜೇಂದರ್ ನಗರದ ನಡುವಿನ ಮೆಟ್ರೋ ರೈಲು ಸೇವೆ ಸೇರಿದಂತೆ ಹಳದಿ ಮತ್ತು ಇತರ ವಲಯದ ಪ್ರದೇಶಗಳ ಮೆಟ್ರೋ ರೈಲು ಸೇವೆಯನ್ನೂ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್