ಕೋವಿಡ್ ಕಾಲದಲ್ಲಿ ಉದ್ಯೋಗ ಖಾತ್ರಿಯಿಂದ ರಕ್ಷಣೆ: ರಾಹುಲ್ ಗಾಂಧಿ
ಇದನ್ನು ಒಪ್ಪಿಲು ಪ್ರಧಾನಿ ಮೋದಿ ಸಿದ್ಧರಿಲ್ಲ
Team Udayavani, Jul 2, 2022, 8:39 PM IST
ವಯನಾಡ್: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯು ಕೋವಿಡ್ ಕಾಲದಲ್ಲಿ ಲಕ್ಷಾಂತರ ಭಾರತೀಯರಿಗೆ ಆಶ್ರಯ ನೀಡಿತು. ಯುಪಿಎ ಸರ್ಕಾರವು ದೇಶದ ಅಸಹಾಯಕರಿಗೆ ನೆರವಾಗಲೆಂದು, ಅವರಿಗೆ ಭದ್ರತಾ ಒದಗಿಸಲೆಂದು ಈ ಯೋಜನೆ ಜಾರಿ ಮಾಡಿತ್ತು. ಆದರೆ, ಅದನ್ನು ಒಪ್ಪಿಕೊಳ್ಳಲು ಪ್ರಧಾನಿ ಮೋದಿಯವರು ಸಿದ್ಧರಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತಮ್ಮ ಕ್ಷೇತ್ರ ವಯನಾಡ್ನ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ನೆನ್ಮೇನಿ ಎಂಬ ಗ್ರಾಮ ಪಂಚಾಯತ್ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ಫಲಾನುಭವಿಗಳನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.
ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಮೋದಿ ಅವರು “ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯದ ಸಜೀವ ಸ್ಮಾರಕ’ ಎಂದು ಟೀಕಿಸಿದ್ದರು. ಆದರೆ, ಈ ಸಾಮೂಹಿಕ ಉದ್ಯೋಗ ಯೋಜನೆಯ ಆಳವನ್ನು ಅವರು ಅರಿತುಕೊಂಡಿಲ್ಲ. ಈ ಯೋಜನೆಯು ದೇಶದ ಕಾರ್ಮಿಕ ಮಾರುಕಟ್ಟೆಯಲ್ಲಿ ಹೇಗೆ ದೊಡ್ಡಮಟ್ಟದ ಬದಲಾವಣೆಯನ್ನು ತಂದಿತು ಮತ್ತು ಲಕ್ಷಾಂತರ ಮಂದಿಗೆ ಬದುಕು ಕಟ್ಟಿಕೊಳ್ಳಲು ಹೇಗೆ ನೆರವಾಯಿತು ಎಂಬುದು ಅವರಿಗೆ ಗೊತ್ತಿಲ್ಲ.
ಮೋದಿ ಸರ್ಕಾರ ಮಾಡಿದ ನೋಟು ಅಮಾನ್ಯ ಮತ್ತು ಜಿಎಸ್ಟಿಯ ಅಸಮರ್ಪಕ ಅನುಷ್ಠಾನದಿಂದಾಗಿ ದೇಶದ ಆರ್ಥಿಕತೆ ಪತನದಂಚಿಗೆ ಹೋದಾಗ, ಬಡ ದುಡಿಯುವ ವರ್ಗದ ಜೀವನೋಪಾಯವನ್ನು ರಕ್ಷಿಸಿದ್ದೇ ಉದ್ಯೋಗ ಖಾತ್ರಿ ಯೋಜನೆ ಎಂದೂ ರಾಹುಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ