ಜಮ್ಮು-ಕಾಶ್ಮೀರ: ಜೂ.6ರೊಳಗೆ ಪಂಡಿತರು ಸುರಕ್ಷಿತ ಸ್ಥಳಕ್ಕೆ

ಶಿಕ್ಷಕಿ ಹತ್ಯೆ ಬಳಿಕದ ಕಾಶ್ಮೀರಿ ಪಂಡಿತರಿಗೆ ಮತ್ತಷ್ಟು ಭದ್ರತೆ ನೀಡಲು ಕ್ರಮ

Team Udayavani, Jun 2, 2022, 7:00 AM IST

thumb 2

ಶ್ರೀನಗರ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಮಂತ್ರಿಗಳ ವಿಶೇಷ ಯೋಜನೆಯಡಿ ಉದ್ಯೋಗದಲ್ಲಿರುವ ಕಾಶ್ಮೀರಿ ಉದ್ಯೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ನಿರ್ಧರಿಸಿದೆ.

ಜೂ.6ರ ಒಳಗಾಗಿ ಈ ಪ್ರಕ್ರಿಯೆ ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರಾಡಳಿತ ಪ್ರದೇಶದ ಹಿರಿಯ ಅಧಿಕಾರಿ ಬುಧವಾರ ಜಮ್ಮುವಿನಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳ ವಿಶೇಷ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾಶ್ಮೀರ ಪಂಡಿತ ಸಮುದಾಯದವರನ್ನು ಉಗ್ರರು ಪತ್ತೆ ಹಚ್ಚಿ ಕೊಲ್ಲುತ್ತಿದ್ದಾರೆ. ಹೀಗಾಗಿ, ಯೋಜನೆಯ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಅಲ್ಪಸಂಖ್ಯಾತ ಕಾಶ್ಮೀರ ಪಂಡಿತ ಸಮುದಾಯದವರನ್ನು ಮತ್ತು ಇತರ ಉದ್ಯೋಗಿಗಳನ್ನು ಕೇಂದ್ರಾಡಳಿತ ಪ್ರದೇಶದ ಇತರ ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗುತ್ತದೆ. ದುರ್ಗಮ ಮತ್ತು ಸಂಪರ್ಕಕ್ಕೆ ಸಿಗದ ಪ್ರದೇಶಗಳಲ್ಲಿ ಉದ್ಯೋಗಿಗಳು ಕೆಲಸ ಮಾಡದಂತೆಯೂ ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ನೇತೃತ್ವದಲ್ಲಿ ಶಿಕ್ಷಕಿ ಹತ್ಯೆ ಬಳಿಕ ಉಂಟಾಗಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸರಣಿ ಸಭೆಗಳನ್ನು ನಡೆಸಲಾಗಿದೆ. ಅಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿಶೇಷ ಆದ್ಯತೆ:
ಪ್ರಧಾನಮಂತ್ರಿಗಳ ವಿಶೇಷ ಯೋಜನೆ ಅಡಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಮಸ್ಯೆ ನಿವಾರಿಸಲೋಸುಗ ಲೆಫ್ಟಿನೆಂಟ್‌ ಗವರ್ನರ್‌ ಕಚೇರಿಯ ವ್ಯಾಪ್ತಿಯಲ್ಲಿರುವ ಸಾಮಾನ್ಯ ಆಡಳಿತ ವಿಭಾಗ ವಿಶೇಷ ಇ-ಮೇಲ್‌ ಅನ್ನು ಸೃಷ್ಟಿಸಿದೆ. ಅದಕ್ಕೆ ಬರುವ ದೂರು, ಕುಂದು-ಕೊರತೆಗಳನ್ನು ಆದ್ಯತೆಯಲ್ಲಿ ಪರಿಹರಿಸಬೇಕು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕೂಡ ಉದ್ಯೋಗಿಗಳು ಹೊಂದಿರುವ ಸಮಸ್ಯೆ, ಕೊರತೆಗಳನ್ನು ಪರಿಹರಿಸಲು ಮುತುವರ್ಜಿ ವಹಿಸಬೇಕು ಎಂದೂ ಸಭೆಯಲ್ಲಿ ನಿರ್ಧರಿಸಲಾಗಿದೆ. ಜತೆಗೆ ಕಾಶ್ಮೀರಿ ಪಂಡಿತ ಸಮುದಾಯದ ಉದ್ಯೋಗಿಗಳು ಮತ್ತು ಯೋಜನೆಯ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಇತರರಲ್ಲಿ ಸುರಕ್ಷತೆಯ ಭಾವನೆಯನ್ನು ಮೂಡಿಸುವಂತೆಯೂ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಬಿಗಿ ಭದ್ರತೆ:
ಶಿಕ್ಷಕಿ ರಜನಿ ಬಾಲಾ ಹತ್ಯೆ ಖಂಡಿಸಿ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಿಂದ ಸಾಮೂಹಿಕವಾಗಿ ವಲಸೆ ಹೋಗುವ ಬೆದರಿಕೆಯನ್ನು ಕಾಶ್ಮೀರಿ ಪಂಡಿತರು ಈಗಾಗಲೇ ಒಡ್ಡಿದ್ದಾರೆ. ಅದಕ್ಕೆ ಪೂರಕವಾಗಿ ಶ್ರೀನಗರದ ವೆಸು ಪಂಡಿತ್‌ ಎಂಬಲ್ಲಿರುವ ಕಾಶ್ಮೀರಿ ಪಂಡಿತರ ಕಾಲೋನಿಗೆ ಬಿಗಿ ಭದ್ರತೆಯನ್ನು ಒದಗಿಸಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಪ್ರಧಾನಮಂತ್ರಿಗಳ ವಿಶೇಷ ಪ್ಯಾಕೇಜ್‌ ಅಡಿ 4 ಸಾವಿರ ಮಂದಿ ಕಾಶ್ಮೀರಿ ಪಂಡಿತರು ಉದ್ಯೋಗದಲ್ಲಿ ಇದ್ದಾರೆ. ಅವರೆಲ್ಲರೂ, ತಮ್ಮನ್ನು ಜಮ್ಮುವಿಗೆ ಸ್ಥಳಾಂತರಿಸಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.

ಪ್ರತಿಭಟನೆ:
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂವ್‌ನಲ್ಲಿ ಕಾಶ್ಮೀರಿ ಪಂಡಿತ ಸಮುದಾಯದ ಶಿಕ್ಷಕಿ ರಜನಿ ಬಾಲಾ ಹತ್ಯೆ ಖಂಡಿಸಿ ಬುಧವಾರ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿವೆ. ಜಮ್ಮು, ಸಂಬಾ ಮತ್ತು ಕತುವಾ ಜಿಲ್ಲೆಗಳಲ್ಲಿ ಕಾಶ್ಮೀರ ಪಂಡಿತ ಸಮುದಾಯದವರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಸಂಬಾದಲ್ಲಿ ಪ್ರತಿಭಟನಾಕಾರರು ಜಮ್ಮು- ಪಠಾಣ್‌ಕೋಟ್‌ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಶಿಕ್ಷಕಿ ರಜನಿ ಬಾಲಾ (36) ಅವರ ಹತ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಜನಿ ಬಾಲಾ ವರ್ಗಾವಣೆಗೊಳ್ಳಬೇಕು ಎಂದು ಹಲವು ತಿಂಗಳಿಂದ ಪ್ರಯತ್ನ ಮಾಡುತ್ತಿದ್ದರೂ, ಜಿಲ್ಲಾ ಪಂಚಾಯಿತಿ ಸಿಇಒ ಅದಕ್ಕೆ ಲಕ್ಷ್ಯ ವಹಿಸಲಿಲ್ಲ ಎಂದು ದೂರಿದ್ದಾರೆ. ಕೊನೇ ಹಂತವಾಗಿ ಸೋಮವಾರ ಅವರಿಗೆ ವರ್ಗಾವಣೆ ಆದೇಶ ಲಭಿಸಿತ್ತು. ಜಮ್ಮು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಜನಿ ಅವರ ತವರು ಜಿಲ್ಲೆ ಸಾಂಬಾದಲ್ಲಿ ಘಟನೆ ಖಂಡಿಸಿ ಸ್ವಯಂ ಪ್ರೇರಿತವಾಗಿ ಬಂದ್‌ ನಡೆಸಲಾಯಿತು. ಈ ನಡುವೆ, ಹತ್ಯೆಗೀಡಾದ ರಜನಿ ಅವರ ಅಂತ್ಯಕ್ರಿಯೆ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ಭಯೋತ್ಪಾದನೆಯ ವಿರುದ್ಧ ಹೋರಾಟ ಎನ್ನುವುದು ದಿನದಲ್ಲಿ ಮುಕ್ತಾಯವಾಗದು. ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟದಲ್ಲಿ ಕೇಂದ್ರ ಸರ್ಕಾರ ಗೆಲ್ಲಲಿದೆ. ಹಿಂದಿನ ಸರ್ಕಾರಗಳಂತೆ ಈಗಿನ ಸರ್ಕಾರ ಬೆದರಿ ಕುಳಿತುಕೊಳ್ಳುವುದಿಲ್ಲ ಎಂಬ ವಿಚಾರವೂ ಉಗ್ರರಿಗೆ ಗೊತ್ತಿದೆ.
 - ಎಸ್‌.ಜೈಶಂಕರ್‌, ವಿದೇಶಾಂಗ ಸಚಿವ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.