ಟೈರ್ ಸ್ಪೋಟಗೊಂಡು ಉರುಳಿಬಿದ್ದ ಟ್ರಕ್: 3 ವಲಸೆ ಕಾರ್ಮಿಕರ ಸಾವು, 12 ಜನರ ಸ್ಥಿತಿ ಗಂಭೀರ
Team Udayavani, May 19, 2020, 8:50 AM IST
ಉತ್ತರಪ್ರದೇಶ: ಟ್ರಕ್ ಒಂದರ ಟೈರ್ ಸ್ಪೋಟಗೊಂಡು ಮಗುಚಿಬಿದ್ದ ಪರಿಣಾಮ ಮೂರು ಜನ ಮಹಿಳಾ ವಲಸೆ ಕಾರ್ಮಿಕರು ಮೃತಪಟ್ಟು, 12 ಜನ ಗಂಭೀರ ಗಾಯಗೊಂಡ ಘಟನೆ ಝಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕಳೆದ ರಾತ್ರಿ 17 ಜನ ವಲಸೆ ಕಾರ್ಮಿಕರ ತಂಡ ದೆಹಲಿಯಿಂದ ಉತ್ತರಪ್ರದೇಶದಲ್ಲಿರುವ ತಮ್ಮ ಗ್ರಾಮಗಳಿಗೆ ಕಾಲ್ನಡಿಗೆಯಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಬಂದ ಟ್ರಕ್ ಒಂದನ್ನು ನಿಲ್ಲಿಸಿ ಡ್ರೈವರ್ ಬಳಿ ತಮ್ಮ ಗ್ರಾಮಗಳಿಗೆ ಬಿಡುವಂತೆ ಕೋರಿಕೊಂಡಿದ್ದಾರೆ. ಇದಕ್ಕೆ ಒಪ್ಪಿದ ಆತ 17 ಜನರನ್ನೂ ಕೂಡ ಹತ್ತಿಸಿಕೊಂಡಿದ್ದಾನೆ.
ಆದರೆ ಅರ್ಧ ದಾರಿ ಸಮೀಪಿಸುವಷ್ಟರಲ್ಲೇ ಟ್ರಕ್ ಟೈರ್ ಸ್ಪೋಟ ಗೊಂಡು ಮಗುಚಿಬಿದ್ದಿದೆ. ಪರಿಣಾಮವಾಗಿ 3 ಜನರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟು 13 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲಾಕ್ ಡೌನ್ ಕಾರಣದಿಂದ ದೇಶದ ಹಲವೆಡೆ ವಲಸೆ ಕಾರ್ಮಿಕರು ತೀವ್ರತರಹವಾದ ತೊಂದರೆ ಅನುಭವಿಸುತ್ತಿದ್ದು ತಮ್ಮ ಊರುಗಳಿಗೆ ಕಾಲ್ನಡಿಗೆ ಯ ಮೂಲಕವೇ ತೆರಳುತ್ತಿದ್ದಾರೆ. ಕಳೆದ 10 ದಿನಗಳಲ್ಲಿ ಸುಮಾರು 50ಕ್ಕಿಂತ ಹೆಚ್ಚು ಜನರು ವಲಸೆ ಕಾರ್ಮಿಕರು, ಅಪಘಾತಕ್ಕೀಡಾಗಿ ದುರಂತ ಸಾವನ್ನಪ್ಪಿದ್ದಾರೆ. ಶನಿವಾರವಷ್ಟೆ ಟ್ರಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ 26 ಜನರು ಮೃತರಾಗಿದ್ದರು.
ವಲಸೆ ಕಾರ್ಮಿಕರ ದುಸ್ಥಿತಿ ಕಂಡು ಸುಪ್ರೀಂ ಕೋರ್ಟ್ ಕೂಡ ಕೆಲ ದಿನಗಳ ಹಿಂದೆ ಕಳವಳ ವ್ಯಕ್ತಪಡಿಸಿತ್ತು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಕೂಡ ಅಂತರ್ ರಾಜ್ಯ ಗಡಿಯನ್ನೇ ಮುಚ್ಚುವ ನಿರ್ಧಾರ ತೆಗೆದುಕೊಂಡಿದ್ದು, ಕಾಲ್ನಡಿಗೆಯಲ್ಲಿ ತೆರಳುವವರಿಗೆ ಆಶ್ರಯ, ಅಹಾರದ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ