ಸೇನಾಪಡೆಗಳ ಎನ್ ಕೌಂಟರ್ ಗೆ ಉಗ್ರ ಬಲಿ: ಮುಂದುವರೆದ ಶೋಧಕಾರ್ಯ
ಯುರೋಪಿಯನ್ ಯೂನಿಯನ್ ನಿಯೋಗ ಇಂದು ಜಮ್ಮು ಕಾಶ್ಮೀರಕ್ಕೆ ಭೇಟಿ
Team Udayavani, Oct 29, 2019, 10:43 AM IST
ಜಮ್ಮು-ಕಾಶ್ಮೀರ: ಇಂದು ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಸೇನಾಪಡೆಗಳು ಅನಂತ್ನಾಗ್ ಜಿಲ್ಲೆಯಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ. ಮತ್ತಿಬ್ಬರು ಉಗ್ರರು ಪರಾರಿಯಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.
ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು, ಭಯೋತ್ಪಾದಕರ ದಾಳಿಗೆ ಇತ್ತೀಚಿಗೆ ಲಾರಿ ಚಾಲಕನೊಬ್ಬ ಬಲಿಯಾಗಿದ್ದ. ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾದಲ್ಲಿ ಉಗ್ರರು ಚಾಲಕನನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಆ ದಾಳಿಯ ಪ್ರಮುಖ ಉಗ್ರನೋರ್ವನನ್ನು ಇಂದು ಸೇನಾ ಪಡೆಗಳು ಎನ್ ಕೌಂಟರ್ ನಡೆಸಿ ಹೊಡೆದುರುಳಿಸಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿ ಕಳೆದ 2 ವಾರಗಳಿಂದ ಈಚೆಗೆ ನಡೆದ ಉಗ್ರರ ದಾಳಿಗೆ 6 ಮಂದಿ ಟ್ರಕ್ ಚಾಲಕರು ಸಾವನ್ನಪ್ಪಿದ್ದಾರೆ. ಕಾಶ್ಮೀರರೇತರನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ನಿನ್ನೆ ಹೊರ ರಾಜ್ಯಗಳ ಟ್ರಕ್ ಚಾಲಕರನ್ನು ಶೋಫಿಯಾನ್ ನಗರದಿಂದ ಹೊರ ಕಳಿಸಲು ಮುಂದಾಗಿದ್ದರು. ಮರುದಿನವೇ ಮತ್ತೊಂದು ದಾಳಿ ನಡೆದಿದೆ.
ಯುರೋಪಿಯನ್ ಯೂನಿಯನ್ ನಿಯೋಗ ಇಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು ಆ ಹಿನ್ನಲೆಯಲ್ಲಿ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ನಿಯೋಗ 370 ನೇ ವಿಧಿ ರದ್ದು ಪಡಿಸಿದ ನಂತರ ಜಮ್ಮು-ಕಾಶ್ಮೀರದಲ್ಲಿನ ವಸ್ತುಸ್ಥಿತಿಯ ಕುರಿತು ಅಧ್ಯಯನ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!