ಜಿಆರ್ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ, 3 ಸಾವು, ಜಮ್ಮು ಹೈಅಲರ್ಟ್
Team Udayavani, Jan 9, 2017, 10:28 AM IST
ಶ್ರೀನಗರ : ಇಂದು ಸೋಮವಾರ ನಸುಕಿನ ವೇಳೆ ಉಗ್ರರು ಜಮ್ಮು ಕಾಶ್ಮೀರದ ಅಖನೂರ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆಗೆ ಎರಡು ಕಿ.ಮೀ. ಸನಿಹದಲ್ಲಿರುವ ಜನರಲ್ ಇಂಜಿನಿಯರಿಂಗ್ ರಿಸರ್ವ್ ಫೋರ್ಸ್ (ಜಿಆರ್ಪಿಎಫ್ ) ಶಿಬಿರದ ಮೇಲೆ ದಾಳಿ ನಡೆಸಿದ ಪರಿಣಾಮವಾಗಿ ಮೂವರು ನಾಗರಿಕರು ಕೊಲ್ಲಲ್ಪಟ್ಟ ಘಟನೆ ವರದಿಯಾಗಿದೆ.
ಉಗ್ರರ ದಾಳಿಯನ್ನು ಅನುಸರಿಸಿ ಭದ್ರತಾ ಪಡೆ ಈಗ ಇಡಿಯ ಪ್ರದೇಶವನ್ನು ಸುತ್ತುವರಿದಿವೆ.
ನಸುಕಿನ ಸುಮಾರು 2 ಗಂಟೆಯ ವೇಳೆಗೆ ಅಖನೂರ್ ವಲಯದ ಬತ್ತಾಲ ಪ್ರದೇಶಕ್ಕೆ ಸಮೀಪ ಉಗ್ರರು ಜಿಆರ್ಪಿಎಫ್ ಶಿಬಿರದ ಮೇಲೆ ದಾಳಿ ನಡೆಸಿದ್ದರು.
ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಜಮ್ಮು ಜಿಲ್ಲೆಯಾದ್ಯಂತ ಮಾತ್ರವಲ್ಲದೆ ಖೌರ್ ತೆಹಶೀಲ್ ವ್ಯಾಪ್ತಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಜಿಆರ್ಪಿಎಫ್ ದಳವು ಬಿಎಸ್ಎಫ್ ನ ಅಂಗ ಸಂಸ್ಥೆಯಾಗಿದ್ದು ಇದು ದೇಶದ ಗಡಿ ಭಾಗಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಅದರ ನಿರ್ವಹಣೆಯ ಹೊಣೆಗಾರಿಕೆಯನ್ನು ಹೊಂದಿದೆ.
ಕಳೆದ ವರ್ಷ ಸೆ.28-29ರಂದ ಭಾರತ ಪಾಕ್ ಗಡಿಯೊಳಗೆ ನುಗ್ಗಿ ಸರ್ಜಿಕಲ್ ದಾಳಿ ಎಸಗಿದ ಬಳಿಕ ಗಡಿಯಯಲ್ಲಿ ಸೇನಾ ಹೊರ ಠಾಣೆಗಳನ್ನು ಗುರಿ ಇರಿಸಿ ಉಗ್ರರು ದಾಳಿ ನಡೆಸುವುದು ಈಗ ನಿರಂತರವಾಗಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ