ಜಮ್ಮು-ಕಾಶ್ಮೀರ: ಕೊಡಲಿಯಿಂದ ಪೊಲೀಸ್ ಅಧಿಕಾರಿ ಹತ್ಯೆಗೈದ ಉಗ್ರರು, ASI ಸ್ಥಿತಿ ಗಂಭೀರ
Team Udayavani, Apr 13, 2020, 6:40 PM IST
ಜಮ್ಮು-ಕಾಶ್ಮೀರ: ಜಮ್ಮು ಕಾಶ್ಮೀರದ ಕಿಶ್ ತ್ವಾರ್ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು, ಎಎಸ್ ಐ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ ಎಂದು ವರದಿ ತಿಳಿಸಿದೆ.
ವರದಿ ಪ್ರಕಾರ, ಡಕನ್ ಪ್ರದೇಶದ ಟಾನ್ದಾರ್ ಗ್ರಾಮದಲ್ಲಿ ಸ್ಥಳೀಯ ಪೊಲೀಸರ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಬಳಿಕ ಕೊಡಲಿಯಿಂದ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದಿದ್ದು, ಘಟನೆಯಲ್ಲಿ ಎಎಸ್ ಐ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವುದಾಗಿ ವರದಿ ವಿವರಿಸಿದೆ.
ಮೃತ ಪೊಲೀಸ್ ಅಧಿಕಾರಿಯನ್ನು ಪಾಶಿದ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿ ಎಎಸ್ ಐ ವಿಶಾಲ್ ಸಿಂಗ್ ಎಂದು ಗುರುತಿಸಲಾಗಿದೆ.
ಪೊಲೀಸ್ ಅಧಿಕಾರಿಗಳ ಮೇಳೆ ಟಾನ್ದಾರ್ ಗ್ರಾಮದ ನಿವಾಸಿಗಳಾದ ಬಶ್ರಾತ್ ಹುಸೈನ್ ಮತ್ತು ಆತನ ಸಹಚರ ಆಶಿಖಿ ಹುಸೈನ್ ಎಂದು ಜಮ್ಮು ಕಾಶ್ಮೀರ ಪೊಲೀಸರು ಆರೋಪಿಸಿದ್ದಾರೆ. ಆರೋಪಿ ಆಶಿಖಿ ಹುಸೈನ್ ಆರ್ ಪಿಸಿ ಸೆಕ್ಷನ್ 363 ಹಾಗೂ 376ರ ಅಡಿ ಬಂಧಿಸಲ್ಪಟ್ಟಿದ್ದು, 20 ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಎಂಬ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ.
ಘಟನೆ ಬಳಿಕ ದಾಳಿಕೋರರನ್ನು ಸೆರೆಹಿಡಿಯುವ ನಿಟ್ಟಿನಲ್ಲಿ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ನೇತೃತ್ವದ ತಂಡ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ