ಶಾಲಾ ಮಕ್ಕಳಿಗಾಗಿ “ಮಿನಿ ಬಾಕ್ಸ್’ ಯೋಜನೆ; ಏನೇನು ಇರಲಿದೆ ಬಾಕ್ಸ್ನಲ್ಲಿ?
Team Udayavani, Dec 22, 2022, 7:25 AM IST
ಹೊಸದಿಲ್ಲಿ: ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸಲು ದಿಲ್ಲಿ ಸರಕಾರ “ಮಿನಿ ಬಾಕ್ಸ್’ ಎಂಬ ವಿನೂತನ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.
ಶಿಕ್ಷಣ ನಿರ್ದೇಶನಾಲಯದ ಸುತ್ತೋಲೆಯ ಪ್ರಕಾರ ಎಲ್ಲ ಶಾಲೆ ಗಳ ವೇಳಾಪಟ್ಟಿಯಲ್ಲಿ ಮಧ್ಯಾಹ್ನ ಊಟದ ಎರಡೂವರೆ ಗಂಟೆಗೂ ಮುನ್ನ, 10 ನಿಮಿಷದ ಸ್ನ್ಯಾಕ್ ಬ್ರೇಕ್ ಇರಬೇಕು.
ಮಿನಿ ಬಾಕ್ಸ್ನಲ್ಲಿ ಏನಿರಲಿದೆ?
ಪ್ರತೀ ದಿನ ಮೂರು ಆಹಾರ ಪದಾರ್ಥಗಳ ಆಯ್ಕೆಯನ್ನು ಮಿನಿ ಬಾಕ್ಸ್ಗೆ ನೀಡಲಾಗಿದೆ. ಹಣ್ಣು, ಸಲಾಡ್, ಹುರಿದ ಕಾಳು, ಮೊಳಕೆ ಕಾಳು ಇತ್ಯಾದಿ ಪದಾರ್ಥಗಳನ್ನು ಮಿನಿ ಬಾಕ್ಸ್ ಕಡ್ಡಾಯವಾಗಿ ಹೊಂದಿರಬೇಕು. ಪ್ರತೀ ವಾರದ ಆಹಾರದ ಪಟ್ಟಿಯನ್ನು ತಯಾರಿಸಿ, ಶಾಲೆಯ ಎಲ್ಲ ತರಗತಿಗಳಲ್ಲೂ ಅದನ್ನು ಅಳವಡಿಸಬೇಕು.
ವಾರದ ಆಹಾರ ಪಟ್ಟಿಯಲ್ಲಿರುವ ಪದಾರ್ಥಗಳು ದುಬಾರಿ ಯಾಗದ ರೀತಿಯಲ್ಲಿ ಯೋಜನೆಯನ್ನು ತಯಾರಿಸಬೇಕು. ಜತೆಗೆ ಮಕ್ಕಳು, ಪಟ್ಟಿಯಲ್ಲಿರುವ ಒಂದು ಪದಾರ್ಥವನ್ನಾದರೂ ತರು ವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನಾಲಯ ತಿಳಿಸಿದೆ.
ಶಾಲಾ ಮುಖ್ಯಸ್ಥರು ಹಾಗೂ ಶಾಲೆಯ ಗೃಹವಿಜ್ಞಾನ ಶಿಕ್ಷಕರು ಯೋಜನೆಯು ಪರಿಣಾಮಕಾರಿಯಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು. ಜತೆಗೆ ಸಂಜೆ ಕಾರ್ಯಾಚರಿಸುವ ಶಾಲೆಗಳಲ್ಲಿ ಮಿನಿ ಸ್ನ್ಯಾಕ್ಸ್ನಲ್ಲಿ ಹೆಚ್ಚು ಪೋಷಕಾಂಶವಿರುವ ಪದಾರ್ಥ ಗಳಿರು ವಂತೆ ಯೋಜನೆ ರೂಪಿಸಬೇಕು ಎಂದು ಸೂಚಿಸಿದೆ.
ಪೋಷಕರಿಗೆ ಸಮಾಲೋಚನೆ: ಉತ್ತಮ, ಪೌಷ್ಟಿಕಯುಕ್ತ ಆಹಾರ ಸೇವನೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ನಡು ವಿನ ಪ್ರಾಮುಖ್ಯದ ಅರಿವು ಮೂಡಿಸಲು, ಶಾಲೆಗಳಲ್ಲಿ ಗೃಹ ವಿಜ್ಞಾನ ಶಿಕ್ಷಕರ ನೇತೃತ್ವದಲ್ಲಿ ತರಗತಿವಾರು ವಿದ್ಯಾರ್ಥಿಗಳ ಪೋಷಕರಿಗೆ ಸಮಾಲೋಚನೆ ನಡೆಸಬೇಕು. ಈ ಅವಧಿಯಲ್ಲಿ ಕಡಿಮೆ ವೆಚ್ಚದಲ್ಲಿ ತಯಾರಿಸಬಹುದಾದ ಅತೀ ಹೆಚ್ಚು ಪೌಷ್ಟಿಕಾಂಶ ವಿರುವ ಆಹಾರ ಪದಾರ್ಥಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿ ಸಬೇಕು. ಅನಾರೋಗ್ಯದ ಹಿನ್ನೆಲೆಯಲ್ಲಿ ಶಾಲೆಗೆ ಗೈರಾಗುವ ವಿದ್ಯಾರ್ಥಿಗಳ ಹಾಜರಾತಿಯನ್ನು ಹೆಚ್ಚಿಸುವಲ್ಲಿ, ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಗೆ ಈ ಯೋಜನೆ ಉತ್ತೇಜನ ನೀಡಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು