ತಮಿಳುನಾಡು ಸರ್ಕಾರಕ್ಕೇ ಕಿಕ್ಬ್ಯಾಕ್?
Team Udayavani, Dec 9, 2017, 6:00 AM IST
ಚೆನ್ನೈ: ತಮಿಳುನಾಡಿನ ಅಮ್ಮಾ ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆವಾಗ ಇಡೀ ತಮಿಳುನಾಡು ಸರ್ಕಾರವೇ ಲಂಚ ಪಡೆಯುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕರ್ನಾಟಕದ “ಡೈರಿ ಹಗರಣದ” ಮಾದರಿಯಲ್ಲೇ ತಮಿಳುನಾಡಿನಲ್ಲೂ ಡೈರಿಯೊಂದು ಹೊರಬಿದ್ದಿದ್ದು, ಇದರಲ್ಲಿ ಹೆಚ್ಚು ಕಡಿಮೆ ಸಚಿವ ಸಂಪುಟದ ಸದಸ್ಯರ ಹೆಸರುಗಳು ಉಲ್ಲೇಖವಾಗಿರುವುದು ಪತ್ತೆಯಾಗಿದೆ.
ಸದ್ಯ ಅಲ್ಲಿನ ಪೊಲೀಸರ ವಶದಲ್ಲಿರುವ ಮರಳು ಉದ್ಯಮಿ ಶೇಖರ ಜೆ. ರೆಡ್ಡಿ ಬರೆದಿಟ್ಟುಕೊಂಡಿದ್ದ ಡೈರಿಯಲ್ಲಿ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಒ. ಪನೀರ್ಸೆಲ್ವಂ ಹೆಸರುಗಳೂ ಇವೆ. ಅದರಲ್ಲೂ ಡಿಸಿಎಂ ಪನೀರ್ಸೆಲ್ವಂ ಅವರು 2.5 ಕೋಟಿ ರೂ. ಕಿಕ್ಬ್ಯಾಕ್ ಪಡೆದುಕೊಂಡಿದ್ದಾರೆ ಎಂಬ ಉಲ್ಲೇಖವಿದೆ.
ಶೇಖರ ಜೆ. ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದ ಸಂದರ್ಭದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಈ ಸ್ಫೋಟಕ ಮಾಹಿತಿಗಳಿವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಾತ್ರವಲ್ಲದೆ ಸಂಪುಟದ ಪ್ರಮುಖ ಸಚಿವರು, ಹಿರಿಯ ಅಧಿಕಾರಿಗಳಿಗೆ ಕಿಕ್ಬ್ಯಾಕ್ ಸಂದಾಯವಾಗಿದೆ ಎಂದು ಚಾನೆಲ್ ತನ್ನ ವರದಿಯಲ್ಲಿ ಹೇಳಿಕೊಂಡಿದೆ. ಇಷ್ಟು ಮಾತ್ರವಲ್ಲ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡಿರುವ ಟಿ.ಟಿ.ವಿ.ದಿನಕರನ್ಗೂ ಗಣನೀಯ ಪ್ರಮಾಣದಲ್ಲಿ ಹಣ ಸಂದಾಯವಾಗಿದೆ ಎಂದು ಹೇಳಲಾಗಿದೆ.
ಡಿಸಿಎಂ ಓ.ಪನ್ನೀರ್ಸೆಲ್ವಂಗೆ 2.5 ಕೋಟಿ ರೂ., ವಿದ್ಯುತ್ ಸಚಿವ ಪಿ.ತಂಗಮಣಿ, ಕೈಗಾರಿಕಾ ಸಚಿವ ಎಂ.ಸಿ.ಸಂಪತ್, ಇಂಧನ ಸಚಿವ ತಂಗಮಣಿ, ಅರಣ್ಯ ಸಚಿವ ದಿಂಡಿಗಲ್ ಶ್ರೀನಿವಾಸ, ಕಂದಾಯ ಸಚಿವ ಆರ್.ಬಿ.ಉದಯ ಕುಮಾರ್, ಆರೋಗ್ಯ ಸಚಿವ ವಿಜಯ ಭಾಸ್ಕರ್, ಪರಿಸರ ಸಚಿವ ಕೆ.ಸಿ.ಕರುಪ್ಪಣ್ಣಂ, ಶಾಸಕ ಕೃಷ್ಣಸ್ವಾಮಿ ಸೇರಿದಂತೆ ಪ್ರಮುಖರಿಗೆ ಹಣ ಸಂದಾಯವಾಗಿದೆ ಎಂದು ಡೈರಿಯಲ್ಲಿ ಉಲ್ಲೇಖವಾಗಿದೆ. ಡೈರಿಯಲ್ಲಿರುವ ವಿವರಗಳ ಬಗ್ಗೆ ಕೋರ್ಟ್ನಲ್ಲಿ ಮೊಕದ್ದಮೆ ಹೂಡುವುದಾಗಿ ಡಿಎಂಕೆ ವಕ್ತಾರ ಶರವಣನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?