ಅಯೋಧ್ಯೆ ತ್ವರಿತ ವಿಚಾರಣೆಗೆ ಸಚಿವ ರವಿಶಂಕರ್ ಆಗ್ರಹ
Team Udayavani, Dec 26, 2018, 10:14 AM IST
ಲಕ್ನೋ: ರಾಮಜನ್ಮಭೂಮಿ ವಿವಾದವನ್ನು ತ್ವರಿತಗತಿ ಯಲ್ಲಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಬೇಕೆಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸರ್ವೋಚ್ಚ ನ್ಯಾಯಾಲಯವನ್ನು ಕೋರಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಜ. 4ರಂದು ಅಯೋಧ್ಯೆ ವಿವಾದ ವಿಚಾರಣೆಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ಈ ಆಗ್ರಹ ಮಹತ್ವ ಪಡೆದುಕೊಂಡಿದೆ.
15ನೇ ಅಖೀಲ ಭಾರತೀಯ ಅಧಿವಕ್ತಾ ಪರಿಷತ್ನ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, “”ಶಬರಿಮಲೆ ವಿಚಾರದಲ್ಲಿ ನಡೆದ ಕ್ಷಿಪ್ರಗತಿಯ ವಿಚಾರಣೆ ಮಾದರಿಯಲ್ಲೇ, ಅಯೋಧ್ಯೆ ವಿವಾದದ ವಿಚಾರಣೆಯನ್ನೂ ನಡೆಸಿ, ಆದಷ್ಟು ಬೇಗ ತೀರ್ಪು ಪ್ರಕಟಿಸಬೇಕೆಂದು ನನ್ನ ವ್ಯಾಪ್ತಿಯೊಳಗೆ ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ” ಎಂದರು.
ವಿವಾದಾತ್ಮಕ ಹೇಳಿಕೆ ನೀಡಬೇಡಿ: ಇದೇ ವೇಳೆ, ಜ. 4ರಂದು ವಿವಾದ ಸುಪ್ರೀಂನಲ್ಲಿ ವಿಚಾರಣೆಗೆ ಬರುವ ಹಿನ್ನೆಲೆಯಲ್ಲಿ, ವಿವಾದದ ಬಗ್ಗೆ ಯಾರೊಬ್ಬರೂ ವಿವಾದಾತ್ಮಕ ಹೇಳಿಕೆ ನೀಡಬಾರದೆಂದು ಬಾಬ್ರಿ ಮಸೀದಿ ಆ್ಯಕ್ಷನ್ ಕಮಿಟಿ (ಬಿಎಂಎಸಿ) ದೇಶದ ಮುಸ್ಲಿಮರಿಗೆ ಕರೆ ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ