ಹಮೀದ್ ಅನ್ಸಾರಿ ವಿರುದ್ಧ ಬಿಜೆಪಿ ನಾಯಕರು ಗರಂ
Team Udayavani, Jan 28, 2022, 6:55 AM IST
ನವದೆಹಲಿ: ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಜಾಗತಿಕ ವೇದಿಕೆಯೊಂದರಲ್ಲಿ ಭಾರತದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡಲಾರಂಭಿಸಿದೆ ಎಂದು ಅವರು ಹೇಳಿದ್ದು, ಈ ವಿಚಾರವಾಗಿ ಅನೇಕರು ಆಕ್ರೋಶ ಹೊರಹಾಕಲಾರಂಭಿಸಿದ್ದಾರೆ.
ಭಾರತ-ಅಮೆರಿಕ ಮುಸ್ಲಿಂ ಕೌನ್ಸಿಲ್ನ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಮೀದ್ ಅನ್ಸಾರಿ ಮತ್ತು ಅಮೆರಿಕದ ಸಂಸತ್ತಿನ ಮೂವರು ಸದಸ್ಯರು, ಭಾರತದಲ್ಲಿನ ಮಾನವ ಹಕ್ಕು ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದರು. “ದೇಶದಲ್ಲಿ ನಾಗರಿಕ ರಾಷ್ಟ್ರವಾದಕ್ಕೆ ವ್ಯತಿರಿಕ್ತವಾದ ತೋರಿಕೆಯ ಸಾಂಸ್ಕೃತಿಕ ರಾಷ್ಟ್ರವಾದದ ಅನುಕರಣೆ ಹೆಚ್ಚಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಳ್ಳಲಾಗುತ್ತಿದೆ’ ಎಂದು ಅನ್ಸಾರಿ ದೂರಿದ್ದರು.
ಬಿಜೆಪಿ ಆಕ್ರೋಶ:
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಟಾಸ್ ನಖ್ವಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, “ಅನ್ಸಾರಿ ಅವರು ಭಾಗವಹಿಸಿದ ಕಾರ್ಯಕ್ರಮವನ್ನು ನಡೆಸಿದ್ದು, ಪಾಕ್ನ ಐಎಸ್ಐ ಮತ್ತು ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದ ತಂಡ. ಆದರೆ ಭಾರತದ ಸಾಂವಿಧಾನಿಕ ಹುದ್ದೆಯಲ್ಲಿದ್ದವರು ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇ ವಿಚಿತ್ರ’ ಎಂದಿದ್ದಾರೆ. ಬಿಜೆಪಿ ನಾಯಕ ಶಹನವಾಜ್ ಹುಸೇನ್, “ಅನ್ಸಾರಿ ಅವರು ಉಪ ರಾಷ್ಟ್ರಪತಿಯಾಗಿದ್ದಾಗಲೇ ಅನೇಕ ವಿವಾದಗಳನ್ನು ಮಾಡಿಕೊಂಡಿದ್ದರು’ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್
ರಾಜ್ಯಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ: ಉಪರಾಷ್ಟ್ರಪತಿ ನಾಯ್ಡು
ಆನ್ಲೈನ್ನಲ್ಲಿ ಪ್ರೀತಿ, ಮದುವೆ : 12 ಲಕ್ಷ ರೂ ವಂಚಿಸಿದ ಮೂರು ಮಕ್ಕಳ ತಾಯಿ
ಮಿಜೋರಾಂ: ವಿದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 468 ವನ್ಯಜೀವಿಗಳ ರಕ್ಷಣೆ
ಮಹಾರಾಷ್ಟ್ರದಲ್ಲಿ ಬಿ.ಎ.4 ಮತ್ತು ಬಿ.ಎ.5 ಒಮಿಕ್ರಾನ್ ರೂಪಾಂತರಿ ಪತ್ತೆ