ಹಿಂದೂಗಳಿಗೆ ಅಲ್ಪಸಂಖ್ಯಾಕ ಸ್ಥಾನಮಾನ: ಕಾಲಾವಕಾಶ
Team Udayavani, May 11, 2022, 12:38 AM IST
ಹೊಸದಿಲ್ಲಿ: ಹಿಂದೂಗಳಿಗೆ ಅಲ್ಪ ಸಂಖ್ಯಾಕ ಸ್ಥಾನಮಾನ ನೀಡುವ ಕುರಿತಾಗಿ ಎಲ್ಲ ರಾಜ್ಯಗ ಳೊಂದಿಗೆ ಸಮಾಲೋಚನೆ ನಡೆಸಿ ತನಗೆ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಕೆಲವು ರಾಜ್ಯಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ರುವ ಹಿಂದೂಗಳಿಗೆ ಅಲ್ಪಸಂಖ್ಯಾಕರ ಸ್ಥಾನಮಾನ ನೀಡಬೇಕೆಂದ ಮನವಿ ಕುರಿತಂತೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ, ಮೇ 9ರಂದು ಕೇಂದ್ರ ಸರಕಾರ ತನ್ನ ಎರಡನೇ ಅಫಿಡವಿಟ್ ಸಲ್ಲಿಸಿದೆ.
ಅದರಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾಕರೆಂಬ ಸ್ಥಾನಮಾನವನ್ನು ಆಯಾ ರಾಜ್ಯಗಳ ಜನಸಂಖ್ಯಾ ವರದಿಯನ್ನು ಆಧರಿಸಿ ನೀಡುವ ಅಧಿಕಾರ ತನಗಿದ್ದು ಈ ಕುರಿತಂತೆ ಎಲ್ಲ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸರಕಾರ, ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಮೂರು ತಿಂಗಳ ಗಡುವನ್ನು ನೀಡಿದೆ.
ಈ ಹಿಂದೆ, ಇದೇ ಪ್ರಕರಣಕ್ಕೆ ಸಂಬಂಧಿ ಸಿದಂತೆ ಕೇಂದ್ರ ಸರಕಾರ ಸಲ್ಲಿಸಿದ್ದ ಮೊದಲ ಅಫಿಡವಿಟ್ನಲ್ಲಿ, ಹಿಂದೂಗಳಿಗೆ ಅಲ್ಪ ಸಂಖ್ಯಾಕರ ಸ್ಥಾನಮಾನ ನೀಡುವ ವಿಚಾರ ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದು. ತಮ್ಮ ರಾಜ್ಯಗಳಲ್ಲಿನ ಜನಸಂಖ್ಯೆಯ ಅಂಕಿ- ಅಂಶಗಳನ್ನು ಆಧರಿಸಿ ರಾಜ್ಯ ಸರಕಾರಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳು ಈ ಕುರಿತಂತೆ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !