ಮಿರಾಜ್ ದುರಂತವು ದೇಶೀಯ ತಯಾರಿಕೆಗೆ ಹಿನ್ನಡೆಯಲ್ಲ: ನಿರ್ಮಲಾ
Team Udayavani, Feb 4, 2019, 12:30 AM IST
ಕೊಯಮತ್ತೂರು: “ಬೆಂಗ ಳೂರಿನಲ್ಲಿ ಇತ್ತೀಚೆಗೆ ನಡೆದ ಮಿರಾಜ್-2000 ಜೆಟ್ ದುರಂತವು ದೇಶೀಯ ವಿಮಾನ ತಯಾರಿಕೆಗಾದ ಹಿನ್ನಡೆ ಅಲ್ಲ’ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ಕೊಯಮತ್ತೂರಿನಲ್ಲಿ ಭಾನುವಾರ ಮಾತನಾಡಿದ ಅವರು, ದೇಶೀಯವಾಗಿ ವಿಮಾನ ತಯಾರಿಕೆಗೆ ಈ ದುರಂತದಿಂದ ಯಾವುದೇ ಹಿನ್ನಡೆಯಾಗಿಲ್ಲ. ಆದರೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಇನ್ನಷ್ಟು ಸುಧಾರಣೆ ಆಗಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.
ಎಚ್ಎಎಲ್ ಸಂಸ್ಥೆಯು ಮೇಲ್ದರ್ಜೆಗೇರಿಸಿದ್ದ ತರಬೇತಿ ವಿಮಾನವು ಪತನಗೊಂಡು ಇಬ್ಬರು ಪೈಲಟ್ಗಳು ಸಾವಿಗೀಡಾದ ಬೆನ್ನಲ್ಲೇ ಸಚಿವೆಯಿಂದ ಈ ಹೇಳಿಕೆ ಹೊರಬಿದ್ದಿದೆ. ಇದೇ ವೇಳೆ, ಹಿಂದಿನ ಯುಪಿಎ ಸರಕಾರದ ವಿರುದ್ಧ ಹರಿಹಾಯ್ದ ನಿರ್ಮಲಾ, 10 ವರ್ಷಗಳ ಆಡಳಿತಾವಧಿಯಲ್ಲಿ ಯುಪಿಎ ಸರಕಾರವು ಎಚ್ಎಎಲ್ ಆಗಲೀ, ಬಿಇಎಲ್ ಆಗಲೀ, ಯಾವುದೇ ರಕ್ಷಣಾ ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅವರು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದರೆ ಈಗ ಪಿಎಸ್ಯುಗಳು ವಿಶ್ವ ದರ್ಜೆಗೇರುತ್ತಿದ್ದವು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ