ನಾಪತ್ತೆಯಾಗಿದ್ದ HDFC ಉಪಾಧ್ಯಕ್ಷ ಕೊಲೆ,ಮೃತದೇಹ ಪತ್ತೆ, ಓರ್ವ ಸೆರೆ
Team Udayavani, Sep 10, 2018, 11:44 AM IST
ಮುಂಬಯಿ : ಕಳೆದ ವಾರ ನಾಪತ್ತೆಯಾಗಿದ್ದ ಎಚ್ ಡಿ ಎಫ್ ಸಿ ಬ್ಯಾಂಕ್ ಉಪಾಧ್ಯಕ್ಷ ಸಿದ್ಧಾರ್ಥ ಸಾಂಘವಿ ಅವರ ಮೃತ ದೇಹ ನಿನ್ನೆ ಭಾನುವಾರ ಪತ್ತೆಯಾಗಿದೆ.
ಘಟನೆ ಸಂಬಂಧ ಪೊಲೀಸರು 20ರ ಹರೆಯದ ಸರ್ಫರಾಜ್ ಶೇಖ್ ಎಂಬಾತನನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
39ರ ಹರೆಯದ ಸಾಂಘವಿ ಅವರು ಸೆ.5ರ ಗುರುವಾರದಂದು ಇಲ್ಲಿನ ಕಮಲಾ ಮಿಲ್ಸ್ ಕಚೇರಿಯಿಂದ ನಾಪತ್ತೆಯಾಗಿದ್ದರು. ಮರು ದಿನ ಪೊಲೀಸರು ಸಾಂಘವಿ ಅವರ ಪರಿತ್ಯಕ್ತ ಕಾರನ್ನು ನವೀ ಮುಂಬಯಿಯ ಕೋಪರ್ ಖರ್ನೆ ಪ್ರದೇಶದಲ್ಲಿ ಪತ್ತೆ ಹಚ್ಚಿದ್ದರು.
ಸಾಂಘವಿ ಅವರ ನಾಪತ್ತೆ ಪ್ರಕರಣವು ಎನ್ಎಂ ಜೋಷಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಬಂಧಿತ ಶೇಖ್ ತಾನು ಸಾಂಘವಿ ಅವರನ್ನು ಬುಧವಾರ ಕೊಂದಿದ್ದುದಾಗಿ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾನೆ.
ಎಚ್ ಡಿ ಎಫ್ ಸಿ ಉಪಾಧ್ಯಕ್ಷ ಸಾಂಘವಿ ಅವರ ಕೊಲೆಯ ನಾಲ್ವರು ಬಾಡಿಗೆ ಹಂತಕರಲ್ಲಿ ಶೇಖ ಒಬ್ಬನಾಗಿದ್ದಾನೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ