ಕನ್ನಡಿಗರು ಹೊರಗಿನವರು ಎಂದ ಪರಬ್ ವಿರುದ್ಧ ಗೋವಾ ಶಾಸಕ ಕೃಷ್ಣಾ ಸಾಳಕರ್ ಕಿಡಿ
Team Udayavani, Jun 1, 2022, 5:18 PM IST
ಪಣಜಿ: ಕೆಲವು ರಾಜಕೀಯ ನಾಯಕರು ಗೋವಾದಲ್ಲಿ ವಾಸಿಸುತ್ತಿರುವ ಕನ್ನಡಿಗರನ್ನು “ಇವರು ಹೊರಗಿನವರು” (ಗಾಟಿ, ಬಾಯಲೊ) ಎಂಬ ಶಬ್ದ ಬಳಸಿ ಬೇಧಭಾವ ಮಾಡಿ ಜನರಲ್ಲಿ ದ್ವೇಷ ನಿರ್ಮಾಣ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ. ಗೋವಾದಲ್ಲಿ ಕನ್ನಡಿಗರು ಮಾತ್ರವಲ್ಲದೆಯೇ ವಿವಿಧ ರಾಜ್ಯಗಳ ಜನರು ಕಳೆದ ಅನೇಕ ವರ್ಷಗಳಿಂದ ವಾಸಿಸುತ್ತಿದ್ದಾರೆ ಎಂದು ವಾಸ್ಕೊ ಕ್ಷೇತ್ರದ ಬಿಜೆಪಿ ಶಾಸಕ ಕೃಷ್ಣಾ ಸಾಳಕರ್ ಹೇಳಿದರು.
ವಾಸ್ಕೊದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನೋಜ್ ಪರಬ್ ರವರಂತಹ ರಾಜಕಾರಣಿಗಳು ಇಂತಹ ದ್ವೇಷದ ರಾಜಕಾರಣ ಮಾಡಬಾರದು. ಭಾರತದ ಸಂವಿಧಾನವನ್ನು ಗೌರವಿಸದವರಲ್ಲಿ ಪರಬ್ ಕೂಡ ಒಬ್ಬರು. ಇಂತಹ ತಾರತಮ್ಯದಿಂದ ಭವಿಷ್ಯದಲ್ಲಿ ರಾಜ್ಯದ ಜನತೆಗೆ ತೊಂದರೆಯಾಗಬಹುದು ಎಂದು ಅಭಿಪ್ರಾಯಪಟ್ಟರು.
ಸಾಮಾಜಿಕ ತಾಣದಲ್ಲಿ ಶಾಸಕ ಕೃಷ್ಣಾ ಸಾಳಕರ್ ರವರ ವಿರುದ್ಧ ರೆವೊಲ್ಯೂಷನರಿ ಗೋವನ್ಸ್ ಪಕ್ಷದ ಪ್ರಮುಖ ಮನೋಜ್ ಪರಬ್ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಕೃಷ್ಣಾ ಸಾಳಕರ್, ಒಂದು ಪಕ್ಷದ ನಾಯಕ ಇಷ್ಟು ಕೀಳು ಮಟ್ಟಕ್ಕೆ ಹೋಗಿ ತನ್ನ ಸಾಮರ್ಥ್ಯ ವನ್ನು ಸಾಬೀತುಪಡಿಸಿದ್ದಾರೆ. ಪರಬ್ ರವರಂತಹ ನಾಯಕರು ಗೋವಾದಲ್ಲಿರುವ ಹೊರ ರಾಜ್ಯಗಳ ಜನರ ವಿರುದ್ಧ ಇಂತಹ ಹೇಳಿಕೆಯನ್ನು ನೀಡುವುದನ್ನು ನಿಲ್ಲಿಸಬೇಕು. ಪರಬ್ ರವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇಲ್ಲಿ ಕನ್ನಡದ ಜತೆಗೆ ಬೇರೆ ರಾಜ್ಯಗಳ ಜನರೂ ಉದ್ಯೋಗ, ಶಿಕ್ಷಣ ಮತ್ತು ವ್ಯಾಪಾರಕ್ಕಾಗಿ ಹಲವು ವರ್ಷಗಳಿಂದ ಗೋವಾದಲ್ಲಿ ನೆಲೆಸಿದ್ದಾರೆ. ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ