ಪಶ್ಚಿಮಬಂಗಾಳದ ಹೌರಾದಲ್ಲಿ ಭದ್ರತಾಪಡೆ, ಪೊಲೀಸರ ಮೇಲೆ ಹಲ್ಲೆ, ಕಲ್ಲು ತೂರಾಟ
ಪೊಲೀಸರ ಮೇಲೆ ನೂರಾರು ಜನರ ಗುಂಪು ಸುತ್ತುವರಿದು ಅಟ್ಟಿಸಿಕೊಂಡು ಹೋಗಿ ಕಲ್ಲು ಎಸೆದು ಹಲ್ಲೆ ನಡೆಸಿರುವುದಾಗಿ ವರದಿ ತಿಳಿಸಿದೆ.
Team Udayavani, Apr 28, 2020, 8:29 PM IST
ಕೋಲ್ಕತಾ: ಕೋವಿಡ್ 19 ವೈರಸ್ ತಡೆಗಟ್ಟಲು ಲಾಕ್ ಡೌನ್ ಜಾರಿಯಲ್ಲಿದ್ದರೂ ಪಶ್ಚಿಮಬಂಗಾಳದ ಹೌರಾ ನಗರದ ಟಿಕಿಯಾಪಾರಾ ಪ್ರದೇಶದಲ್ಲಿ ಗುಂಪುಗೂಡಿದ್ದ ಜನರನ್ನು ಚದುರಿಸುವ ನಿಟ್ಟಿನಲ್ಲಿ ಪೊಲೀಸರು ಪ್ರಯತ್ನಿಸಿದ ವೇಳೆ ಭದ್ರತಾ ಪಡೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಖಾಲಿ ಬಾಟಲ್ ಗಳಿಂದ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆಕ್ರೋಶಗೊಂಡ ಗುಂಪು ಪೊಲೀಸ್ ಕಾರ್ ಅನ್ನು ಜಖಂಗೊಳಿಸಿದ್ದರು. ಶೀಘ್ರ ಪ್ರಹಾರ ದಳ ಹಾಗೂ ಪೊಲೀಸರ ಮೇಲೆ ನೂರಾರು ಜನರ ಗುಂಪು ಸುತ್ತುವರಿದು ಅಟ್ಟಿಸಿಕೊಂಡು ಹೋಗಿ ಕಲ್ಲು ಎಸೆದು ಹಲ್ಲೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ವೇಳೆ ಯಾವುದೇ ವಿಧದಲ್ಲಿ ಗುಂಪುಗೂಡುವುದಾಗಲಿ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಸೇರುವುದನ್ನು ನಿಷೇಧಿಸಿತ್ತು. ಯಾವುದೇ ಪ್ರದೇಶದಲ್ಲಿಯೂ ಜನ ಸೇರದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಬಂಧ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ