ಡ್ರಗ್ ಸ್ಮಗ್ಲರ್ ನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಗುಂಪಿನಿಂದ ದಾಳಿ: ನಾಲ್ವರಿಗೆ ಗಾಯ
Team Udayavani, Jan 2, 2022, 9:29 AM IST
ಹೊಸದಿಲ್ಲಿ: ವಾಂಟೆಡ್ ಡ್ರಗ್ ಸ್ಮಗ್ಲರ್ ಒಬ್ಬನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದ ಘಟನೆ ಹೊಸದಿಲ್ಲಿಯ ಇಂದ್ರಪುರಿ ಪ್ರದೇಶದಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗುಂಡು ತಾಗಿದ್ದು ಮತ್ತು ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ನಾರ್ಕೋಟಿಕ್ಸ್ ತಂಡವು ಇಂದ್ರಪುರಿಗೆ ವಾಂಟೆಡ್ ಡ್ರಗ್ ಸ್ಮಗ್ಲರ್ ಧರಂವೀರ್ ಅಲಿಯಾಸ್ ಪಲ್ಲಾನನ್ನು ಬಂಧಿಸಲು ತೆರಳಿತ್ತು. ಈ ವೇಳೆ ಪಲ್ಲಾ ಮನೆಯಲ್ಲಿ ಇರಲಿಲ್ಲ.ತಂಡವು ಪಲ್ಲಾ ಮನೆಯಿಂದ ಹೊರಬಂದ ತಕ್ಷಣ, ಧರ್ಮವೀರ್ ಅಲಿಯಾಸ್ ಪಲ್ಲಾ ಸುಮಾರು 50-60 ಜನರೊಂದಿಗೆ ದೊಣ್ಣೆ ಮತ್ತು ಕಲ್ಲುಗಳನ್ನು ಹೊತ್ತು ಬಂದರು. ಗುಂಪು ಏಕಾಏಕಿ ಪೊಲೀಸ್ ತಂಡದ ಮೇಲೆ ದಾಳಿ ಮಾಡಿ ಕಲ್ಲು ತೂರಾಟ ನಡೆಸಿತು. ಅಲ್ಲದೆ ಗುಂಪು ಪೊಲೀಸರ ಮೇಲೆ ಗುಂಡು ಹಾರಿಸಿತು. ಪ್ರತೀಕಾರವಾಗಿ, ಇಬ್ಬರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ.
ಘಟನೆಯ ಸಮಯದಲ್ಲಿ, ಇನ್ಸ್ಪೆಕ್ಟರ್ ಮತ್ತು ಎಎಸ್ಐ ಶ್ರೇಣಿಯ ಅಧಿಕಾರಿಗಳು ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ. ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು, ಧರಂವೀರ್ ಅಲಿಯಾಸ್ ಪಲ್ಲಾ ಪರಾರಿಯಾಗಿದ್ದಾನೆ” ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:ಹತ ಉಗ್ರನ ಗುರುತು ಪತ್ತೆಗೆ ಡಿಎನ್ಎ ಮಾದರಿ ಪರೀಕ್ಷೆ
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಗಾಯಗೊಂಡವರನ್ನು ಅಮಿತ್ ಮತ್ತು ಸೊಹೈಬ್ ಎಂದು ಗುರುತಿಸಲಾಗಿದೆ. ವಿಚಾರಣೆಯ ವೇಳೆ ಅಮಿತ್ ಡ್ರಗ್ ಡೀಲರ್ ಧರಂವೀರ್ ಅಲಿಯಾಸ್ ಪಲ್ಲಾನ ಸಂಬಂಧಿ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!