ವದಂತಿ ತಡೆಗೆ ಮಾಡಿದ್ದು ಏನು?: ಕೇಂದ್ರದ ಪ್ರಶ್ನೆ


Team Udayavani, Jul 20, 2018, 6:00 AM IST

xx-46.jpg

ನವದೆಹಲಿ: ದೇಶಾದ್ಯಂತ ಸಾಮೂಹಿಕವಾಗಿ ಬಡಿದು ಸಾಯಿಸುವ ದುಷ್ಕೃತ್ಯಗಳು (ಲಿಂಚಿಂಗ್‌) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರವು ವಾಟ್ಸ್‌ಆ್ಯಪ್‌ಗೆ ಗುರುವಾರ ಮತ್ತೂಂದು ನೋಟಿಸ್‌ ನೀಡಿದೆ. ಸಂದೇಶಗಳನ್ನು “ಫಾರ್ವರ್ಡೆಡ್‌’ ಎಂದು ಸೂಚಿಸುವ ಫೀಚರ್‌ ಹೊರತು ಪಡಿಸಿ ಬೇರೇನು ಕ್ರಮ ಕೈಗೊಂಡಿದ್ದೀರಿ ಎಂದೂ ಪ್ರಶ್ನಿಸಿದೆ. ದುಷ್ಕೃತ್ಯಕ್ಕೆ ಪ್ರೇರಣೆ ನೀಡುತ್ತಿರುವ ವದಂತಿಗಳು ಹರಡಲು ವಾಟ್ಸ್‌ಆ್ಯಪ್‌ ವೇದಿಕೆಯಾಗಿದೆ. ಇಂತಹ ಸುಳ್ಳು ಸುದ್ದಿಗಳು ಹರಡುವುದನ್ನು ತಡೆಯಲು ಪರಿಹಾರ ಹುಡುಕಬೇಕು. “ಮೌನ ಪ್ರೇಕ್ಷಕ’ ಧೋರಣೆಯನ್ನು ಮುಂದುವರಿ ಸಿದರೆ ಕಾನೂನು ಕ್ರಮದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.  

ಸುಳ್ಳು ಸುದ್ದಿಗಳ ಪ್ರಸರಣವಾಗದಂತೆ ತಡೆಗಟ್ಟಲು ಪಾರದರ್ಶಕ ಹಾಗೂ ಪರಿಣಾಮಕಾರಿ ನಿಯಮಾವಳಿಗಳನ್ನು ರೂಪಿಸಲು ಆದ್ಯತೆ ನೀಡಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ  ತಿಳಿಸಿದೆ. ಇದಕ್ಕೂ ಮುನ್ನ ಸುಳ್ಳು ಸಂದೇಶ ಹರಡುವುದನ್ನು ತಡೆಯಲು ಕ್ರಮ ವಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಫೇಸ್‌ಬುಕ್‌ ಮಾಲಿಕತ್ವದ ವಾಟ್ಸ್‌ಆ್ಯಪ್‌, ಇಂತಹ ಸಂದೇಶ ಕಳುಹಿಸುವವರ ಗುರುತು ಪತ್ತೆಗೆ ಹೊಸ ಫೀಚರ್‌ ಅಳವಡಿಸುವುದಾಗಿ ಘೋಷಿಸಿತ್ತು.

ಇದೇ ವೇಳೆ, ಸಾಮಾಜಿಕ ಮಾಧ್ಯಮದ ದುರ್ಬಳಕೆ ಕುರಿತು ರಾಜಕೀಯ ಪಕ್ಷಗಳೂ ಸೇರಿದಂತೆ ಸಂಬಂಧಿಸಿದವರ ಜೊತೆಗೆ ಮಾತುಕತೆ ನಡೆಸಲಾಗುತ್ತದೆ ಎಂದು ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್‌ ಹೇಳಿದ್ದಾರೆ. ಚರ್ಚೆ ನಡೆಸಿ ಸಾಮಾಜಿಕ ಮಾಧ್ಯಮದ ದುರ್ಬಳಕೆ ತಡೆಗೆ ನೀತಿ ರೂಪಿಸಲಾಗುತ್ತದೆ ಎಂದಿದ್ದಾರೆ.

ಫಾರ್ವರ್ಡೆಡ್‌ ಸಂದೇಶದ ಫೀಚರ್‌ ಬಿಟ್ಟರೆ ಬೇರೇನು ಮಾಡಿದಿರಿ ಎಂದು ಪ್ರಶ್ನೆ
ಮೂಕ ಪ್ರೇಕ್ಷಕ ಧೋರಣೆ ಮುಂದುವರಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.