ಕೃಷಿ ವಲಯಕ್ಕೆ ಹೆಚ್ಚಿನ ಆಧುನೀಕರಣದ ಅಳವಡಿಕೆ ಅಗತ್ಯ : ಮನ್ ಕಿ ಬಾತ್ ನಲ್ಲಿ ಮೋದಿ
Team Udayavani, Mar 28, 2021, 2:10 PM IST
ನವ ದೆಹಲಿ : ಕೃಷಿ ಕ್ಷೇತ್ರದಲ್ಲಿ ಆಧುನೀಕರಣವನ್ನು ಅಳವಡಿಸಿಕೊಳ್ಳುವುದು ಇಂದಿನ ಕಾಲಮಾನಕ್ಕೆ ಬಹಳ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರ ಮಾಸಿಕ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಕೃಷಿ ವಲಯಗಳ ಭವಿಷ್ಯದ ಬಗ್ಗೆ ಮಾತನಾಡಿದರು.
ಇಂದಿನ ಕಾಲಮಾನಕ್ಕೆ ಕೃಷಿ ವಲಯಕ್ಕೆ ಆಧುನಿಕ ಪದ್ಧತಿಗಳು ಅತ್ಯಗತ್ಯ ಎಂದು ಪ್ರತಿಪಾದಿಸಿದ ಪ್ರಧಾನಿ, ಜೀವನದ ಪ್ರತಿಯೊಂದು ಹಂತದಲ್ಲಿಯೂ ಆಧುನೀಕರಣವನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.
ಓದಿ : ಕನಕಪುರಕ್ಕಾದರೂ ಬರಲಿ ಬೆಂಗಳೂರಿಗಾದರೂ ಬರಲಿ ಬಂದಾಗ ನೋಡೋಣ: ಡಿ ಕೆ ಸುರೇಶ್
ಭಾರತೀಯ ಕೃಷಿ ಪದ್ಧತಿಗೆ ಆಧುನೀಕರಣದ ತುರ್ತು ಅಗತ್ಯತೆ ಇದೆ. ಈಗಾಗಲೇ ನಾವು ಸಮಯ ಮೀರಿದ್ದೇವೆ. ಇಷ್ಟೋತ್ತಿಗಾಗಲೇ ನಮ್ಮ ಕೃಷಿ ಪದ್ಧತಿಯಲ್ಲಿ ಆಧುನೀಕರಣ ದೊಡ್ಡ ಮಟ್ಟದಲ್ಲಿ ಅಳವಡಿಕೆಯಾಗಿರಬೇಕಿತ್ತು ಎಂದು ಅವರು ತಮ್ಮ 75 ನೇ ಮನ್ ಕಿ ಬಾತ್ ಸಂಚಿಕೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ಕೃಷಿ ವಲಯದಲ್ಲಿ ಉದ್ಯೋಗವಕಾಶಗಳನ್ನು ಹೆಚ್ಚಿಸುವ ಸಲುವಾಗಿ, ಕೃಷಿಕರ ಆದಾಯವನ್ನು ಹೆಚ್ಚಿಸಲು, ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಜೊತೆಗೆ ಆಧುನೀಕರಣ ಪರ್ಯಾಯಗಳನ್ನು, ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವುದು ಕೂಡ ಮುಖ್ಯ ಎಂದರು.
ಶ್ವೇತ ಕ್ರಾಂತಿಯ ಸಂದರ್ಭದಲ್ಲಿ ದೇಶವು ಇದಕ್ಕೆ ಸಾಕ್ಷಿಯಾಗಿದೆ. ಜೇನುನೊಣ ಸಾಕಾಣಿಕೆ ಅಂತಹ ಒಂದು ಪರ್ಯಾಯವಾಗಿ ಹೊರಹೊಮ್ಮುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಇನ್ನು, ದೇಶದ ಕೋವಿಡ್ 19 ಸೋಂಕಿನ ವಿರುದ್ಧವಾಗಿ ವಿಶ್ವದಲ್ಲೇ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಲಸಿಕೆ ಆಂದೋಲನದ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.
ದೇಶದಲ್ಲಿ ಕೋವಿಡ್ 19 ನ ರೂಪಾಂತರಿ ಅಲೆಯ ಕಾರಣದಿಂದ ದಿನ ನಿತ್ಯ ಹೆಚ್ಚುತ್ತಿರುವ ಸೋಂಕಿನ ಪ್ರಕರಣಗಳ ಬಗ್ಗೆ ಎಚ್ಚರಿಕೆ ನೀಡಿರುವ ಅವರು, ಔಷಧಿಗಳ ಜೊತೆಜೊತೆಗೆ ಕಟ್ಟು ನಿಟ್ಟಿನ ಕಠಿಣವಾದ ಕ್ರಮಗಳ(ದವಾಯಿ ಭಿ, ಕಡೈ ಭಿ) ಬಗ್ಗೆಯೂ ಮುಖ್ಯ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ