ಶಿಂಜೋ ಅಬೆ ಹತ್ಯೆ: ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಪ್ರಧಾನಿ ಮೋದಿ
ಸಿಎಂ ಬೊಮ್ಮಾಯಿ ಧಾರವಾಡ, ಹಾವೇರಿ ಪ್ರವಾಸ ಮುಂದೂಡಿಕೆ
Team Udayavani, Jul 8, 2022, 7:13 PM IST
ನವದೆಹಲಿ/ ಬೆಂಗಳೂರು: ‘ಆತ್ಮೀಯ ಸ್ನೇಹಿತ’ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ.
ಶಿಂಜೋ ಅಬೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಮತ್ತು ಭಾರತದ ಆಳವಾದ ಗೌರವದ ಸಂಕೇತವಾಗಿ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ತಮ್ಮ ಆತ್ಮೀಯ ಗೆಳೆಯನ ದುರಂತ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ಪದಗಳಲ್ಲಿ ಹೇಳಲಾಗದಷ್ಟು ದುಃಖಿತನಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಶಿಂಜೋ ಅಬೆ ಗುಂಡಿನ ದಾಳಿಗೆ ಗುರಿಯಾಗಿ ಸಾವನ್ನಪ್ಪಿದ್ದರು.
ಸಿಎಂ ಪ್ರವಾಸ ಮುಂದೂಡಿಕೆ
ನಾಳೆ ದೇಶಾದ್ಯಂತ ಶೋಕಾಚಾರಣೆ ಘೋಷಿಸಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಾಳೆ, ಶನಿವಾರ, ಧಾರವಾಡ, ನಾಡಿದ್ದು ಭಾನುವಾರ ಕೈಗೊಳ್ಳಬೇಕಾಗಿದ್ದ ಹಾವೇರಿ ಪ್ರವಾಸ ಮುಂದೂಡಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್