ವಾರಾಣಸಿಯಿಂದ ಮೋದಿ ಸ್ಪರ್ಧೆ
Team Udayavani, Mar 22, 2019, 12:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಸಲು ಕೆಲವೇ ದಿನಗಳಿರುವಾಗ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ಸ್ಪರ್ಧಿಸಲಿದ್ದಾರೆ.
ಪಟ್ಟಿಯಲ್ಲಿನ ಮಹತ್ವಪೂರ್ಣ ಬದಲಾವಣೆ ಎಂದರೆ ಗುಜರಾತ್ನ ಗಾಂಧಿನಗರ ಕ್ಷೇತ್ರದಿಂದ ಹಾಲಿ ಸಂಸದ ಎಲ್.ಕೆ.ಆಡ್ವಾಣಿ ಸ್ಥಾನದಲ್ಲಿ ಬಿಜೆಪಿ ಅಧ್ಯಕ್ಷ ಅಧ್ಯಕ್ಷ ಅಮಿತ್ ಷಾ ಸ್ಪರ್ಧಿಸುತ್ತಿದ್ದಾರೆ. ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ಎದುರು ಅಮೇಥಿಯಲ್ಲಿ ಸ್ಮತಿ ಇರಾನಿ ಸ್ಪರ್ಧಿಸಲಿದ್ದಾರೆ.
2014ರಲ್ಲೂ ಸ್ಮತಿ ಸ್ಪರ್ಧಿಸಿದ್ದರಾದರೂ, ಸೋಲು ಅನುಭವಿಸಿದ್ದರು. ಲಕ್ನೋದಿಂದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪುನರಾಯ್ಕೆ ಬಯಸಲಿದ್ದಾರೆ. ಒಟ್ಟು 20 ರಾಜ್ಯಗಳ 182 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಮುಖಂಡ ಜೆ.ಪಿನಡ್ಡಾ ಬಿಡುಗಡೆ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ವಿವಾದಾತ್ಮಕ ಸಂಸದ ಸಾಕ್ಷಿ ಮಹಾರಾಜ್ರನ್ನು ಉನ್ನಾವ್ ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ. ಪಶ್ಚಿಮ ಬಂಗಾಳದ 42 ಕ್ಷೇತ್ರಗಳಲ್ಲಿ 22ರಲ್ಲಿ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ ಅಸಾನ್ಸೋಲ್ನಿಂದ ಹಾಲಿ ಸಂಸದ, ಕೇಂದ್ರ ಸಚಿವ ಬಾಬುಲ್ ಸುಪ್ರಿಯೋಗೆ ಟಿಕೆಟ್ ನೀಡಿದೆ. ಅಲ್ಲದೆ ಕೆಲವೇ ದಿನಗಳ ಹಿಂದೆ ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಅನುಪಮ್ ಹಜ್ರಾಗೆ ಜಾದವ್ಪುರ ಟಿಕೆಟ್ ನೀಡಲಾಗಿದೆ.
ಕೇರಳದಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ಹಾಲಿ ಸಂಸದ ಶಶಿ ತರೂರ್ ವಿರುದ್ಧ ತಿರುವನಂತಪುರದಲ್ಲಿ ಕುಮ್ಮನಂ ರಾಜಶೇಖರನ್ರನ್ನು ಕಣಕ್ಕಿಳಿಸಿದೆ. ರಾಜಶೇಖರನ್ ಇತ್ತೀಚೆಗಷ್ಟೇ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿ ವಾಪಸಾಗಿದ್ದರು. ಇನ್ನು ಕಾಸರಗೋಡಿನಲ್ಲಿ ಬಿಜೆಪಿ ನಾಯಕ ರವೀಶ ತಂತ್ರಿ ಕುಂಟಾರು ಅವರಿಗೆ ಟಿಕೆಟ್ ನೀಡಲಾಗಿದೆ. ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್ ರಿಜಿಜು ಅರುಣಾಚಲ ಪೂರ್ವದಿಂದ ಸ್ಪರ್ಧಿಸಲಿದ್ದಾರೆ. ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಪುತ್ರ ದುಶ್ಶಂತ್ 4ನೇ ಬಾರಿಗೆ ಸ್ಪರ್ಧಿಸಲಿದ್ದಾರೆ.
ಶೀಘ್ರದಲ್ಲಿಯೇ ಬಿಹಾರ ಪಟ್ಟಿ: ಬಿಹಾರದ ಪಟ್ಟಿ ಬಿಡುಗಡೆ ಬಗ್ಗೆ ಪ್ರತಿಕ್ರಿಯೆ ನೀಡಿದ ಜೆ.ಪಿ.ನಡ್ಡಾ 17 ಮಂದಿ ಮೊದಲ ಪಟ್ಟಿಗೆ ಬಿಜೆಪಿ ಚುನಾವಣಾ ಸಮಿತಿ ಅನುಮತಿ ನೀಡಿದೆ. ಅದನ್ನು ರಾಜ್ಯ ಘಟಕಕ್ಕೆ ಕಳುಹಿಸಲಾಗಿದೆ. ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದಿದ್ದಾರೆ.
ಮೋದಿ ಕ್ಷೇತ್ರ ಬದಲಾವಣೆ ಇಲ್ಲ
ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಒಡಿಶಾದ ಪುರಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈ ಊಹಾಪೋಹ ಈಗ ಹುಸಿಯಾಗಿದೆ. ಕಳೆದ ಬಾರಿ ವಾರಾಣಸಿಯಲ್ಲಿ ಎಎಪಿಯ ಅರವಿಂದ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ನ ಅಜಯ್ ರಾಯ್ ವಿರುದ್ಧ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಒಡಿಶಾ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮಹತ್ವದ ಜಯಗಳಿಸಿದ್ದರಿಂದಾಗಿ, ಅಲ್ಲಿ ಮೋದಿ ಸ್ಪರ್ಧಿಸುವ ಊಹಾಪೋಹ ಕೇಳಿಬಂದಿತ್ತು.
ಆಡ್ವಾಣಿ ಸ್ಪರ್ಧೆ ಇಲ್ಲ
ಬಿಜೆಪಿಯ ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ವಯಸ್ಸಿನ ಕಾರಣದಿಂದ ಈ ಬಾರಿ ಸ್ಪರ್ಧಿಸುತ್ತಿಲ್ಲ. ಮೂಲಗಳ ಪ್ರಕಾರ ಅವರು ಸ್ಪರ್ಧಿಸಲು ನಿರಾಕರಿ ಸಿ ದ್ದರಿಂದ, ಗಾಂಧಿನಗರದಿಂದ ಅಮಿತ್ ಶಾ ಸ್ಪರ್ಧಿಸಲಿದ್ದಾರೆ. ಈಗಾಗಲೇ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲದ ಆಡ್ವಾಣಿ, ಸಾರ್ವಜನಿಕ ಜೀವನದಿಂ ದಲೇ ದೂರವಾಗಿದ್ದಂತಿದೆ.
ಎನ್ಪಿಪಿ ಪಟ್ಟಿಯಲ್ಲಿ ಬಿಜೆಪಿ ವಲಸಿಗರೇ ಹೆಚ್ಚು
ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿ 29 ಕ್ಷೇತ್ರಗಳಿಗಾಗಿ ಅಭ್ಯರ್ಥಿಗಳ ಮೊದಲಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಗೃಹ ಸಚಿವ ಕುಮಾರ್ ವೈ, ಪ್ರವಾಸೋದ್ಯಮ ಸಚಿವ ಜರ್ಕಾರ್ ಗಾಮ್ಲಿನ್ರನ್ನು ಕ್ರಮವಾಗಿ ಬಾಮೆಂಗ್ ಮತ್ತು ಆಲೋ (ಪೂರ್ವ) ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ. ಅವರಿಬ್ಬರಿಗೆ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿತ್ತು. ಬಿಜೆಪಿಯಿಂದ ಟಿಕೆಟ್ ನಿರಾಕರಿಸಲ್ಪಟ್ಟಿರುವ ತಪುಕ್ ಟಕು, ಪಾನಿ ತರಮ್, ತಾಗ್ವಾಂಗ್ ವಾಂಘಂ, ಪಕ್ನಾಗಾ ಬಾಗೆ ಅವರಿಗೂ ನ್ಯಾಷನಲ್ ಪೀಪಲ್ಸ್ ಪಾರ್ಟಿ ಟಿಕೆಟ್ ನೀಡಿದೆ. ಒಟ್ಟು 17 ಮಂದಿ ಹೊಸಬರಿಗೆ ಮೇಘಾಲಯ ಮುಖ್ಯಮಂತ್ರಿ ಕೊನಾರ್ಡ್ ಸಂಗ್ಮಾ ನೇತೃತ್ವದ ಪಕ್ಷ ಟಿಕೆಟ್ ನೀಡಿದೆ. ಏ.11ರಂದು ಮೊದಲ ಹಂತದ ಚುನಾವಣೆಯಲ್ಲಿ ಲೋಕಸಭೆ, ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ