ಮೋದಿಗೆ ಸ್ಕ್ರಿಪ್ಟ್ ಬೇಕಾಗಿಲ್ಲ
Team Udayavani, Dec 21, 2018, 6:10 AM IST
ನವದೆಹಲಿ: “ಪತ್ರಕರ್ತರನ್ನು ಎದುರಿಸಲು ನಾನು ಭಯಪಡುತ್ತಿರಲಿಲ್ಲ” ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
ಪ್ರಧಾನಿ ಮೋದಿಗೆ ಯಾರೂ ಸ್ಕ್ರಿಪ್ಟ್ ಬರೆದುಕೊಡಬೇಕಾಗಿಲ್ಲ, ಹಾಗೆಯೇ ಟೆಲಿಪ್ರಾಂಪ್ಟರ್ ಕೂಡ ಬೇಕಾಗಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಟಾಸ್ ನಖ್ವಿ ಹೇಳಿದ್ದಾರೆ. ಸೋಮವಾರ ನಡೆದ ತಮ್ಮದೇ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ್ದರು. ನಾನು ಪ್ರತಿ ಬಾರಿ ವಿದೇಶ ಪ್ರವಾಸಕ್ಕೆ ಹೋದಾಗಲೂ ವಿಮಾನದಲ್ಲೇ ಪತ್ರಿಕಾಗೋಷ್ಠಿ ನಡೆಸುತ್ತಿದ್ದೆ. ಆದರೆ, ಈಗ ಮೋದಿ ಅವರು ಪತ್ರಿಕಾಗೋಷ್ಠಿಯನ್ನೇ ನಡೆಸಿಲ್ಲ ಎಂದಿದ್ದರು.
ಈ ಸಂಬಂಧ ಮಂಗಳವಾರ ಮಾತನಾಡಿದ ಬಿಜೆಪಿ ನಾಯಕ ಮುಖಾ¤ರ್ ಅಬ್ಟಾಸ್ ನಖೀÌ, ಡಾ. ಸಿಂಗ್ ಅವರು, ಯಾರೋ ಬರೆದುಕೊಟ್ಟದ್ದನ್ನು, ಟೆಲಿಪ್ರಾಂಪ್ಟರ್ನಲ್ಲಿ ಬಂದದ್ದನ್ನು ಅಥವಾ ಯಾರೋ ನಿರ್ದೇಶಿಸಿದ್ದನ್ನು ಮಾತನಾಡುತ್ತಿದ್ದರು. ಡಾ. ಸಿಂಗ್ ಕೈಗೊಂಬೆ ಪ್ರಧಾನಿಯಾಗಿದ್ದರು ಎಂದು ಛೇಡಿಸಿದ್ದಾರೆ. ಇನ್ನು ಬಿಜೆಪಿಯ ಮತ್ತೂಬ್ಬ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ಡಾ. ಸಿಂಗ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಪತ್ರಿಕಾಗೋಷ್ಠಿ ನಡೆಸುವುದು ದೊಡ್ಡದಲ್ಲ, ಅದರಲ್ಲಿ ನೀವು ಏನು ಮಾತನಾಡುತ್ತೀರಿ ಎಂಬುದೇ ಮುಖ್ಯ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ