ಬ್ರಿಟಿಷರು ಮಾಡಿದ್ದಕ್ಕಿಂತ ಹೆಚ್ಚು ಲೂಟಿ ಮೋದಿ ಸರ್ಕಾರ ಮಾಡಿದೆ: ಕೇಜ್ರಿವಾಲ್
250 ವರ್ಷಗಳಲ್ಲಿ ಮಾಡಿದ ಭಾರತದ ಲೂಟಿಯನ್ನು ಮೀರಿಸಿದೆ...
Team Udayavani, Jul 2, 2023, 8:09 PM IST
ಬಿಲಾಸ್ಪುರ್: ಕಳೆದ ಒಂಬತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರದ “ಲೂಟಿ” ಪ್ರಮಾಣವು ಬ್ರಿಟಿಷರು ತಮ್ಮ ಆಡಳಿತದ 250 ವರ್ಷಗಳಲ್ಲಿ ಮಾಡಿದ ಭಾರತದ ಲೂಟಿಯನ್ನು ಮೀರಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.
ಈ ವರ್ಷಾಂತ್ಯದೊಳಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಛತ್ತೀಸ್ಗಢದ ಬಿಲಾಸ್ಪುರದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, 75 ವರ್ಷಗಳಿಂದ ದೇಶವನ್ನು ಲೂಟಿ ಮಾಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ದವೂ ಆಕ್ರೋಶ ಹೊರ ಹಾಕಿ ಛತ್ತೀಸ್ಗಢವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.
“ನಾನು ದೆಹಲಿಯಲ್ಲಿ ಉಚಿತವಾಗಿ ನೀಡುತ್ತಿದ್ದೇನೆ ಎಂದು ಮೋದಿ ಜಿ ನನ್ನ ಮೇಲೆ ಕೋಪಗೊಂಡರು. ಹೌದು, ಮೋದಿಜಿ ನಾನು ವಿತರಿಸುತ್ತಿದ್ದೇನೆ. ಅಗತ್ಯ ವಸ್ತುಗಳ ಬೆಲೆ ಗಗನ ಮುಟ್ಟುತ್ತಿದೆ.ತರಕಾರಿ, ಹಾಲು, ಹಿಟ್ಟು ಎಲ್ಲವೂ ದುಬಾರಿಯಾಯಿತು. ಬೆಲೆಗಳು ಏಕೆ ಏರುತ್ತಿವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಮೋದಿಜಿಯವರು ಸ್ವಾತಂತ್ರ್ಯದ ನಂತರ ಹಿಂದೆಂದೂ ಕಂಡರಿಯದಷ್ಟು ತೆರಿಗೆಯನ್ನು ಹಾಕಿದ್ದಾರೆ. ಮೋದಿಯವರು ಚಹಾ, ಕಾಫಿ, ಹಾಲು, ಎಣ್ಣೆ ಇತ್ಯಾದಿಗಳನ್ನು ಸಹ ಬಿಟ್ಟಿಲ್ಲ. ಆದರೆ ನಿಮ್ಮವರು ಲೂಟಿ ಮಾಡುತ್ತಿದ್ದಾರೆ ಮತ್ತು ಅದನ್ನು ಅವರ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ… ನಾನು ಬಡವರ ಕೈಗೆ ಹಾಕುತ್ತಿರುವಾಗ ನಿಮಗೇಕೆ ಚಿಂತೆ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ