2024ರಲ್ಲಿ ಮೋದಿ ಸರ್ಕಾರಕ್ಕೆ ಬಹುಮತ ಪಡೆಯುವುದೂ ಕಷ್ಟವಾಗಬಹುದು: ಶಶಿ ತರೂರ್
Team Udayavani, Jan 14, 2023, 1:08 PM IST
ಕೋಯಿಕ್ಕೋಡ್: 2019ರ ಲೋಕಸಭಾ ಚುನಾವಣೆಯಲ್ಲಿನ ವಿಜಯವನ್ನು 2024 ರಲ್ಲಿ ಪುನರಾವರ್ತಿಸಲು ಬಿಜೆಪಿಗೆ ಅಸಾಧ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿಯು 50 ಸ್ಥಾನಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಶುಕ್ರವಾರ ಇಲ್ಲಿ ನಡೆದ ಕೇರಳ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ತಿರುವನಂತಪುರಂ ಸಂಸದರು, ಬಿಜೆಪಿಯ ಪ್ರಾಬಲ್ಯದ ಬಗ್ಗೆ ಮಾತನಾಡುವ ವೇಳೆ ಅವರು ಅನೇಕ ರಾಜ್ಯಗಳನ್ನು ಕಳೆದುಕೊಂಡಿರುವುದು ಸಹ ಸತ್ಯ. ಕೇಂದ್ರದಲ್ಲಿ ಅಧಿಕಾರವನ್ನು ಕಳೆದುಕೊಳ್ಳುವುದು ಅಸಾಧ್ಯವೇನಲ್ಲ ಎಂದರು.
2019 ರಲ್ಲಿ ಬಿಜೆಪಿಯವರು ಎಷ್ಟು ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂಬುದನ್ನು ನೀವು ನೋಡಿದರೆ, ಮುಖ್ಯವಾಗಿ ಹರಿಯಾಣ, ಗುಜರಾತ್, ರಾಜಸ್ಥಾನದಲ್ಲಿ ಪ್ರತಿ ಸ್ಥಾನವನ್ನುಗೆದ್ದಿದ್ದರು, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಒಂದು ಸ್ಥಾನವನ್ನು ಹೊರತುಪಡಿಸಿ ಮತ್ತು ಬಂಗಾಳದಲ್ಲಿ ಉತ್ತಮ ಸಾಧನೆ ಮಾಡಿದ್ದರು. ಈಗ ಆ ಎಲ್ಲಾ ಫಲಿತಾಂಶಗಳನ್ನು ಪುನರಾವರ್ತಿಸಲು ಅಸಾಧ್ಯ. ಮತ್ತು 2024 ರಲ್ಲಿ ಬಿಜೆಪಿ ಬಹುಮತಕ್ಕಿಂತ ಕೆಳಗಿಳಿಯ ಬಹುದು” ಎಂದು ತರೂರ್ ಹೇಳಿದರು.
ಇದನ್ನೂ ಓದಿ:ಸ್ಟಾರ್ ಸುವರ್ಣದಲ್ಲಿ ರವಿವಾರ ‘ಕಾಂತಾರ’ ವರ್ಲ್ಡ್ ಪ್ರೀಮಿಯರ್
2019ರಲ್ಲಿ ಪುಲ್ವಾಮಾ ದಾಳಿ ಮತ್ತು ಬಾಲಾಕೋಟ್ ಸ್ಟ್ರೈಕ್ ಗಳು ಕೊನೆಯ ಕ್ಷಣದಲ್ಲಿ ಬಿಜೆಪಿ ಪರವಾದ ಅಲೆಯನ್ನು ಹುಟ್ಟುಹಾಕಲು ಸಹಾಯ ಮಾಡಿದ್ದವು. ಇದು 2024ರಲ್ಲಿ ಸಾಧ್ಯವಿಲ್ಲ. 2024ರಲ್ಲಿ ಬಿಜೆಪಿ ಕನಿಷ್ಠ 50 ಸ್ಥಾನಗಳನ್ನಾದರೂ ಕಳೆದುಕೊಳ್ಳಬಹುದು ಎಂದಿದ್ದಾರೆ.
2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 543 ರಲ್ಲಿ 303 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ