ಮೋದಿ ವರ್ಚಸ್ವಿ ನಾಯಕ : ಹಾಡಿ ಹೊಗಳಿದ ರಜನಿಕಾಂತ್
ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ
Team Udayavani, May 28, 2019, 2:27 PM IST
ಚೆನ್ನೈ: ಜವಹಾರ್ ಲಾಲ್ ನೆಹರು, ರಾಜೀವ್ ಗಾಂಧಿ ಬಳಿಕ ನರೇಂದ್ರ ಮೋದಿ ಭಾರತದ ಓರ್ವ ವರ್ಚಸ್ವಿ ನಾಯಕ ಎಂದು ಸೂಪರ್ಸ್ಟಾರ್ ರಜನಿಕಾಂತ್ ಅವರು ಪ್ರಧಾನಿಯನ್ನುಹಾಡಿ ಹೊಗಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್, ಬಿಜೆಪಿ ನೇತೃತ್ವದ ಎನ್ಡಿಎಯ ಭರ್ಜರಿ ಗೆಲುವು ನಿಜವಾಗಿಯೂ ನರೇಂದ್ರ ಮೋದಿ ಅವರ ಗೆಲುವು ಎಂದರು.
ನಾನು ಮೇ 30 ರಂದು ಪ್ರಧಾನಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ. ಅವರಿಗೆ ಸಾಧ್ಯ ಎನ್ನುವುದನ್ನು ತೋರಿಸಿಕೊಡಬೇಕು. ಯುವಕನಾಗಿರುವ ಹಿನ್ನಲೆಯಲ್ಲಿ ಅವರಿಗೆಪಕ್ಷ ನಿಭಾಯಿಸುವುದು ಕಷ್ಟವಾಗಿರಬಹುದು. ಪ್ರಜಾಪ್ರಭುತ್ವದಲ್ಲಿ ವಿಪಕ್ಷವೂ ಪ್ರಬಲವಾಗಿರಬೇಕು ಎಂದರು.
2017 ರಲ್ಲಿ ರಜನಿಕಾಂತ್ ಅವರು ರಾಜಕೀಯ ಪ್ರವೇಶದ ಕುರಿತಾಗಿ ಘೋಷಿಸಿದ್ದರು. ಆದರೆ ಪ್ರಸಕ್ತ ಲೋಕಸಭಾ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಲು ಉತ್ಸಾಹ ತೋರಿರಲಿಲ್ಲ. ಯಾವೊಬ್ಬ ಅಭ್ಯರ್ಥಿಯು ತನ್ನ ಭಾವಚಿತ್ರ ಬಳಸಿಕೊಳ್ಳಬಾರದಂತೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್