ಪ್ರಧಾನಿ ಮೋದಿ ಚೀತಾಗಿಂತ ಚುರುಕು…. : ಓವೈಸಿ ಹೇಳಿದ್ದೇನು?
Team Udayavani, Sep 14, 2022, 7:23 PM IST
ಜೈಪುರ: ”ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಸಮಸ್ಯೆಗಳಿಂದ ತಪ್ಪಿಸಿಕೊಳ್ಳುವ ವಿಚಾರದಲ್ಲಿ ಚೀತಾಗಿಂತ ಚುರುಕಾಗಿದ್ದಾರೆ” ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬುಧವಾರ ವ್ಯಂಗ್ಯವಾಡಿದ್ದಾರೆ.
ಸೆ 17 ರಂದು ತಮ್ಮ ಜನ್ಮದಿನದಂದು ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗುತ್ತಿರುವ ಎಂಟು ಚೀತಾಗಳನ್ನು ಬಿಡುಗಡೆ ಮಾಡಲು ಪ್ರಧಾನಿ ಮೋದಿ ಸಜ್ಜಾಗಿರುವ ವೇಳೆ ಓವೈಸಿ ಹಗುರವಾದ ಧಾಟಿಯಲ್ಲಿ ಈ ಟೀಕೆ ಮಾಡಿದ್ದಾರೆ.
”ಹಣದುಬ್ಬರ ಅಥವಾ ನಿರುದ್ಯೋಗದಂತಹ ಸಮಸ್ಯೆಗಳು ಉದ್ಭವಿಸಿದಾಗ ಪ್ರಧಾನಿ ಚೀತಾಗಿಂತ ವೇಗವಾಗಿ ಚಲಿಸುತ್ತಾರೆ. ನಾವು ನಿರುದ್ಯೋಗದ ಬಗ್ಗೆ ಮಾತನಾಡುವಾಗ, ಮೋದಿ ಅವರು ಚಿರತೆಯನ್ನು ಸಹ ಮೀರಿಸುತ್ತಾರೆ. ಚೀನಾ ನಮ್ಮ ಪ್ರದೇಶವನ್ನು ಆಕ್ರಮಿಸಿಕೊಂಡಿರುವ ಬಗ್ಗೆ ನಾವು ಕೇಳಿದಾಗ, ಮೋದಿ ಜಿ ಚೀತಾಗಿಂತ ವೇಗವಾಗಿರುತ್ತಾರೆ ”ಎಂದರು.
ಎರಡು ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ, ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ಪ್ರಕರಣದಲ್ಲಿ ಇತ್ತೀಚೆಗೆ ವಾರಣಾಸಿ ನ್ಯಾಯಾಲಯದ ಆದೇಶವನ್ನು ಹಿನ್ನಡೆ ಎಂದು ಕರೆದರು ಮತ್ತು ಇದು ಪೂಜಾ ಸ್ಥಳಗಳ ಕಾಯಿದೆ, 1991 ಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿನ ಮದರಸಾಗಳ ಸಮೀಕ್ಷೆ ನಡೆಸಲು ಮುಂದಾಗಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ