ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ


Team Udayavani, Sep 28, 2021, 6:45 AM IST

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಹೊಸದಿಲ್ಲಿ: ದೇಶದ ಪ್ರತಿಯೊಬ್ಬ ನಾಗರಿಕನಿಗೂ ವಿಶಿಷ್ಟ ಡಿಜಿಟಲ್‌ ಆರೋಗ್ಯ ಸಂಖ್ಯೆ ಒದಗಿಸುವಂಥ “ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು ದೇಶದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತರಲಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ವೀಡಿಯೋ ಕಾನ್ಫರೆನ್ಸ್‌ ಮೂಲಕ ಯೋಜನೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, “ಡಿಜಿಟಲ್‌ ಮೂಲಸೌಕರ್ಯವು ಈಗ ಭಾರತೀಯ ಜನಸಾಮಾನ್ಯನಿಗೆ ಪಡಿತರದಿಂದ ಆಡಳಿತದವರೆಗೆ ಎಲ್ಲವನ್ನೂ ಅತ್ಯಂತ ತ್ವರಿತ ಹಾಗೂ ಪಾರದರ್ಶಕವಾಗಿ ಒದಗಿಸುತ್ತಿದೆ. ಆಡಳಿತಾತ್ಮಕ ಸುಧಾರಣೆಯಲ್ಲಿ ಹಿಂದೆಂದೂ ಕಂಡಿರದಂತೆ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದೆ. ಆರೋಗ್ಯ ಸೇವೆಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಯೋಜನೆಯು ಮಹತ್ವದ ಮೈಲುಗಲ್ಲು’ ಎಂದು ಹೇಳಿದ್ದಾರೆ.

ಈ ಯೋಜನೆಯಿಂದಾಗಿ ದೇಶದ ಯಾವುದೇ ಮೂಲೆಯಲ್ಲಿರುವ ವೈದ್ಯನಿಗೂ ತನ್ನ ರೋಗಿಯ ಆರೋಗ್ಯದ ಸಂಪೂರ್ಣ ವಿವರವನ್ನು ಪಡೆಯಲು ಸಾಧ್ಯವಾಗುತ್ತದೆ. ಇದು ಬಡ ಮತ್ತು ಮಧ್ಯಮವರ್ಗದವರಿಗೆ ಅತಿ ಹೆಚ್ಚು ಪ್ರಯೋಜನಕಾರಿ ಎಂದೂ ಮೋದಿ ಹೇಳಿದ್ದಾರೆ.

2020ರ ಆಗಸ್ಟ್‌ 15ರಂದು ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದ ವೇಳೆ ಪ್ರಧಾನಿ ಮೋದಿ ಅವರು ಈ ಯೋಜನೆಯನ್ನು ಘೋಷಿಸಿದ್ದರು. ತದನಂತರ 6 ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಸೋಮವಾರದಿಂದ ಇದು ದೇಶಾದ್ಯಂತ ಅನುಷ್ಠಾನಗೊಂಡಿದೆ. ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಗೆ 3 ವರ್ಷ ತುಂಬು ತ್ತಲೇ ಈ ಹೊಸ ಯೋಜನೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ:ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಆರೋಗ್ಯ-ಆತಿಥ್ಯ
ಸೋಮವಾರ ವಿಶ್ವ ಪ್ರವಾಸಿ ದಿನವೂ ಆಗಿದ್ದ ಹಿನ್ನೆಲೆಯಲ್ಲಿ ಆ ಕುರಿತೂ ಪ್ರಸ್ತಾಪಿಸಿದ ಮೋದಿ, “ಆರೋಗ್ಯ ಮೂಲಸೌಕರ್ಯವನ್ನು ಬಲಿಷ್ಠಗೊಳಿಸುವುದರಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಉತ್ತೇಜನ ಸಿಗುತ್ತದೆ. ಗೋವಾ, ಹಿಮಾಚಲ ಪ್ರದೇಶದಂಥ ಪ್ರವಾಸಿ ತಾಣಗಳಲ್ಲಿ ಬಹುತೇಕ ಎಲ್ಲ ವಯಸ್ಕರೂ ಕೊರೊನಾ ಲಸಿಕೆಯ ಕನಿಷ್ಠ 1 ಡೋಸ್‌ ಪಡೆದಿದ್ದಾರೆ. ಹೀಗಾಗಿ ಅಂಥ ಪ್ರದೇಶಗಳಿಗೆ ತೆರಳಲು ಪ್ರವಾಸಿಗರು ಇಷ್ಟಪಡುತ್ತಾರೆ. ಸುರಕ್ಷತೆಯ ಭಾವ ಅವರಲ್ಲಿ ಮೂಡುತ್ತದೆ’ ಎಂದು ಹೇಳಿದ್ದಾರೆ.

ಆರೋಗ್ಯಸೇತು, ಕೊವಿನ್‌, ಪ್ರಮಾಣಪತ್ರಕ್ಕೆ ಮೆಚ್ಚುಗೆ
ಭಾರತದಲ್ಲಿ ಸುಮಾರು 130 ಕೋಟಿ ಆಧಾರ್‌ ಬಳಕೆದಾರರು, 118 ಕೋಟಿ ಮೊಬೈಲ್‌ ಚಂದಾದಾರರು, 80 ಕೋಟಿ ಇಂಟರ್ನೆಟ್‌ ಬಳಕೆದಾರರು ಮತ್ತು 43 ಕೋಟಿ ಜನಧನ ಬ್ಯಾಂಕ್‌ ಖಾತೆದಾರರು ಇದ್ದಾರೆ. ಇಂಥದ್ದೊಂದು ಪರಸ್ಪರ ಸಂಪರ್ಕಿತ ಮೂಲಸೌಕರ್ಯವನ್ನು ಜಗತ್ತಿನ ಯಾವ ಮೂಲೆಯಲ್ಲೂ ಕಾಣಲು ಸಾಧ್ಯವಿಲ್ಲ. ಈಗ ಭಾರತದ ಜನರು ಡಿಜಿಟಲ್‌ ಆರೋಗ್ಯ ಗುರುತಿನ ಸಂಖ್ಯೆಯನ್ನೂ ಪಡೆಯಲಿದ್ದಾರೆ ಎಂದೂ ಮೋದಿ ಹೇಳಿದ್ದಾರೆ. ಇದೇ ವೇಳೆ, ತಂತ್ರಜ್ಞಾನದ ಮಹತ್ವದ ಕುರಿತು ಮಾತನಾಡಿದ ಪ್ರಧಾನಿ, “ಆರೋಗ್ಯಸೇತು ಆ್ಯಪ್‌ ಕೊರೊನಾ ಸೋಂಕು ಹರಡುವಿಕೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಭಾರತವು 90 ಕೋಟಿ ಡೋಸ್‌ ಲಸಿಕೆ ವಿತರಿಸಿದೆ. ಇದರಲ್ಲಿ ಕೊವಿನ್‌ ಅಪ್ಲಿಕೇಶನ್‌ ಮತ್ತು ಅದರ ಪೋರ್ಟಲ್‌ನ ಪಾತ್ರ ದೊಡ್ಡದಿದೆ. ನೋಂದಣಿಯಿಂದ ಪ್ರಮಾಣಪತ್ರದವರೆಗೆ ಇಷ್ಟೊಂದು ಅದ್ಭುತವಾದ ವ್ಯವಸ್ಥೆ ಎಲ್ಲಿಯೂ ಇಲ್ಲ’ ಎಂದೂ ಹೇಳಿದ್ದಾರೆ. ಕಳೆದ ವಾರವಷ್ಟೇ ಯುಕೆ ಸರಕಾರವು ಭಾರತದ ಲಸಿಕೆ ಪ್ರಮಾಣಪತ್ರದ ಬಗ್ಗೆ ತಕರಾರು ಎತ್ತಿರುವ ಹಿನ್ನೆಲೆಯಲ್ಲಿ ಮೋದಿ ಅವರ ಈ ಮಾತುಗಳು ಮಹತ್ವ ಪಡೆದಿವೆ.

 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.