World’s largest ಧಾನ್ಯ ಸಂಗ್ರಹ ಯೋಜನೆಗೆ ಮೋದಿ ಚಾಲನೆ : 1.25 ಲಕ್ಷ ಕೋಟಿ ರೂ. ಹೂಡಿಕೆ

ಐದು ವರ್ಷಗಳಲ್ಲಿ 7 ಕೋಟಿ ಟನ್‌ ಧಾನ್ಯ ಸಂಗ್ರಹ ಗುರಿ

Team Udayavani, Feb 25, 2024, 1:03 AM IST

1-wewqewq

ಹೊಸದಿಲ್ಲಿ: ವಿಶ್ವದ ಬೃಹತ್‌ ಧಾನ್ಯ ಸಂಗ್ರಹಾಗಾರ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಮುಂದಿನ ಐದು ವರ್ಷಗಳಲ್ಲಿ 7 ಕೋಟಿ ಟನ್‌ ಧಾನ್ಯ ಸಂಗ್ರಹ ಮಾಡಲು ಸಾಧ್ಯವಾಗುವಂತೆ ಗೋದಾಮುಗಳು, ಸಂಗ್ರಹಾಗಾರ ನಿರ್ಮಿಸುವುದು ಯೋಜನೆಯ ಗುರಿ. ಈ ಹಿನ್ನೆಲೆಯಲ್ಲಿ ದೇಶದ 11 ರಾಜ್ಯಗಳ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ (ಪ್ಯಾಕ್ಸ್‌) 11 ಗೋದಾಮುಗಳನ್ನು ಸಾಂಕೇತಿಕ ವಾಗಿ ಉದ್ಘಾಟಿಸಲಾಯಿತು.

ಸಹಕಾರಿ ಕ್ಷೇತ್ರದಲ್ಲಿ ಸಂಘಗಳನ್ನು ಬಲ ಪಡಿಸುವುದರ ಜತೆಗೆ ರೈತರ ಧಾನ್ಯಗಳ ದಾಸ್ತಾನಿಗೆ ಅಗತ್ಯ ವ್ಯವಸ್ಥೆ ಮಾಡಿಕೊಡಲು ಕೇಂದ್ರ ಸರಕಾರವು 1.25 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ. ಕಾರ್ಯಕ್ರಮದಲ್ಲಿ ಮೋದಿಯವರು 500 ಇತರ ಪ್ಯಾಕ್ಸ್‌ ಗಳಲ್ಲಿ ಗೋದಾಮುಗಳು, ಇತರ ಕೃಷಿ ಸೌಲಭ್ಯಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಮೋದಿ ಹೇಳಿದ್ದೇನು?
ಯೋಜನೆ ಉದ್ಘಾಟಿಸಿ ಮಾತನಾಡಿದ ಮೋದಿ, ಇವತ್ತು ನಾವು ವಿಶ್ವದ ಬೃಹತ್‌ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಬೃಹತ್‌ ಯೋಜನೆ ಮೂಲಕ, ಮುಂದಿನ ಐದು ವರ್ಷಗಳಲ್ಲಿ 7 ಕೋಟಿ ಟನ್‌ ಸಂಗ್ರಹ ಸಾಮರ್ಥ್ಯವನ್ನು ನಿರ್ಮಿಸ ಲಾಗುವುದು. ಇದಕ್ಕಾಗಿ 1.25 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು’ ಎಂದು ಹೇಳಿದ್ದಾರೆ.

ನಾವು ವಿಶ್ವದ ಬೃಹತ್‌ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ್ದೇವೆ. ಇದರ ಮೂಲಕ ದೇಶಾದ್ಯಂತ ಸಾವಿರಾರು ಸಂಗ್ರಹಾಗಾರಗಳು, ಗೋದಾಮುಗಳನ್ನು ನಿರ್ಮಿಸಲಾಗು ವುದು. ಹಿಂದಿನ ಸರಕಾರಗಳು ಈ ವಿಚಾರಕ್ಕೆ ಆದ್ಯತೆಯನ್ನೇ ನೀಡಿರಲಿಲ್ಲ. ಇವತ್ತು ಸಹಕಾರಿ ಸಂಘಗಳ ಮೂಲಕ ಈ ಸಮಸ್ಯೆಗೆ ಉತ್ತರ ನೀಡಿದ್ದೇವೆ.

ಗೋದಾಮುಗಳಿಂದ ಲಾಭಗಳೇನು?
ಈ ಸಂಗ್ರಹಾಗಾರಗಳಲ್ಲಿ ರೈತರು ಧಾನ್ಯ ಸಂಗ್ರಹಿಸಿಡಬಹುದು. ಸೂಕ್ತ ಬೆಲೆ ಬಂದಾಗ ಮಾರಬಹುದು. ಇಲ್ಲಿ ಧಾನ್ಯಗಳನ್ನು ಇರಿಸಿ ಸಾಲವನ್ನೂ ಪಡೆಯಬಹುದು.

2 ಲಕ್ಷ ಪ್ಯಾಕ್ಸ್‌ ಸ್ಥಾಪನೆ ಗುರಿ
ದೇಶಾದ್ಯಂತ ಕೃಷಿ ಸಹಕಾರಿ ಸಂಘ (ಪ್ಯಾಕ್ಸ್‌)ಗಳನ್ನು 2 ಲಕ್ಷಕ್ಕೇರಿಸುವ ಗುರಿಯನ್ನು ಮೋದಿ ಸರಕಾರ ಹೊಂದಿದೆ. ಒಟ್ಟು ಕೃಷಿ ಉತ್ಪಾದಕ ಸಂಘಗಳನ್ನು (ಎಫ್ಪಿಒ) 10 ಸಾವಿರಕ್ಕೆ ಏರಿಸುವ ಗುರಿಯಿದೆ. ಈಗಾಗಲೇ 8 ಸಾವಿರ ಎಫ್ಪಿಒಗಳನ್ನು ಸ್ಥಾಪಿಸಲಾಗಿದೆ ಎಂದೂ ಮೋದಿ ಹೇಳಿದ್ದಾರೆ.

 

 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.