ಇಂದು ಕೇದಾರನಾಥಕ್ಕೆ ಪ್ರಧಾನಿ ಮೋದಿ
Team Udayavani, Nov 5, 2021, 7:20 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ 6.30ಕ್ಕೆ ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಲಿದ್ದು, ಮೋದಿ ಅವರ ಸ್ವಾಗತಕ್ಕೆ ಕೇದಾರ ಸಜ್ಜಾಗಿದೆ.
ಬೆಳಗ್ಗೆ ಕೇದಾರನಾಥದಲ್ಲಿ ತಲೆಎತ್ತಿರುವ ಆದಿ ಗುರು ಶಂಕರಾಚಾರ್ಯದ ಪ್ರತಿಮೆಯನ್ನು ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಅನಂತರ ಯಾತ್ರೆಗೆಂದು ಬರುವ ಅರ್ಚಕರ ವಸತಿ ಗೃಹವಾದ ಸರಸ್ವತಿ ಘಾಟ್ ಸೇರಿದಂತೆ ಒಟ್ಟಾರೆ 130 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ. 400 ಕೋಟಿ ರೂ. ವೆಚ್ಚದ ಕೇದಾರಪುರಿ ಮರು ನಿರ್ಮಾಣ ಯೋಜನೆಯ ಶಿಲಾನ್ಯಾಸವನ್ನೂ ಅವರು ಇದೇ ಸಂದರ್ಭದಲ್ಲಿ ನೆರವೇರಿಸಲಿದ್ದಾರೆ. ಇದು ಪ್ರಧಾನಿ ಮೋದಿ ಅವರ ಕನಸಿನ ಯೋಜನೆಯಾಗಿದ್ದು, ಹಲವು ಬಾರಿ ಮೋದಿ ಅವರೇ ಕೇದಾರನಾಥಕ್ಕೆ ಆಗಮಿಸಿ ಕಾಮಗಾರಿಗಳನ್ನು ಪರಿಶೀಲಿಸಿದ್ದಾರೆ.
ಶುಕ್ರವಾರ ಬೆಳಗ್ಗೆಯೇ ದೇವಾಲಯದಲ್ಲಿ ಮೋದಿ ಅವರು ಮಹಾರುದ್ರಾಭಿಷೇಕ ಕೈಗೊಳ್ಳಲಿದ್ದು, ದೇಶದ ಒಳಿತಿಗಾಗಿ ಪ್ರಾರ್ಥಿಸಲಿದ್ದಾರೆ ಎಂದು ಕೇದಾರನಾಥ ದೇಗುಲದ ಅರ್ಚಕರಾದ ಬಾಗೀಶ್ ಲಿಂಗ್ ಹೇಳಿದ್ದಾರೆ.
ದೇಶಾದ್ಯಂತ ನೇರಪ್ರಸಾರ: ಆದಿಶಂಕರಾಚಾರ್ಯರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮವನ್ನು ದೇಶದ ಉಳಿದ 11 ಜ್ಯೋತಿರ್ಲಿಂಗಗಳು, ನಾಲ್ಕು ಮಠಗಳು, ಪ್ರಮುಖ ಶಿವ ದೇವಾಲಯಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಮಿ ತಿಳಿಸಿದ್ದಾರೆ. ಪ್ರತಿಮೆಗೆ ಹೊಳಪು ಬರಲಿ ಎಂಬ ಉದ್ದೇಶದಿಂದ ತೆಂಗಿನಕಾಯಿಯ ನೀರಿನಿಂದ ಪಾಲಿಶ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ