ಲಂಕಾಗೆ ಅಭಯ

ಉಗ್ರರ ದಾಳಿಯಿಂದ ತತ್ತರಿಸಿರುವ ದ್ವೀಪರಾಷ್ಟ್ರಕ್ಕೆ ಮೋದಿ ಬಲ

Team Udayavani, Jun 10, 2019, 6:00 AM IST

PTI6_9_2019_000066A

ಕೊಲಂಬೊ: ದಶಕಗಳ ನಂತರ ಮತ್ತೆ ಚಿಗುರೊಡೆದಿರುವ ಭಯೋತ್ಪಾದನೆಯಿಂದಾಗಿ ತತ್ತರಿಸಿರುವ ಶ್ರೀಲಂಕಾದ ಐಕ್ಯಮತವನ್ನು ಕಾಪಾಡುವಲ್ಲಿ ಭಾರತ ಎಂದೆಂದಿಗೂ ಆ ದೇಶದ ಬೆನ್ನಿಗೆ ನಿಂತಿರುತ್ತದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾದ ನಿವಾಸಿಗಳಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಮ್ಮ ಎರಡು ದಿನಗಳ ವಿದೇಶ ಪ್ರವಾಸದಲ್ಲಿ ಮಾಲ್ಡೀವ್ಸ್‌ ಭೇಟಿ ಮುಗಿಸಿ, ಭಾರತದ ಕಡೆಗೆ ಭಾನುವಾರ ಮರಳುವಾಗ, ಮಾರ್ಗ ಮಧ್ಯೆ ಶ್ರೀಲಂಕಾಕ್ಕೆ ಭೇಟಿ ನೀಡಿದರು. ಇತ್ತೀಚೆಗೆ ನಡೆದಿದ್ದ ಈಸ್ಟರ್‌ ಸರಣಿ ಸ್ಫೋಟಕ್ಕೆ ತುತ್ತಾದ ಚರ್ಚ್‌ಗಳಲ್ಲೊಂದಾದ ಸೇಂಟ್ ಅಂಥೋನಿಯವರ ಚರ್ಚ್‌ಗೆ ಭೇಟಿ ನೀಡಿ, ಅಲ್ಲಿನ ಘಟನಾವಳಿಗಳನ್ನು ನೆನೆದು ಮಮ್ಮಲ ಮರುಗಿದರು.

ಭಯೋತ್ಪಾದಕರ ದಾಳಿಯು ಹೇಡಿತನದ ಕೃತ್ಯವೆಂದು ಬಣ್ಣಿಸಿದ ಅವರು, ಇಂಥ ಘಟನೆಗಳ ಹೊರತಾಗಿಯೂ ಶ್ರೀಲಂಕಾ ಮತ್ತೆ ಖಂಡಿತವಾಗಿಯೂ ಪುಟಿದೇಳುತ್ತದೆ. ಸ್ಫೋಟದಲ್ಲಿ ತಮ್ಮ ಸಂಬಂಧಿಗಳನ್ನು ಕಳೆದುಕೊಂಡ ಮನೆಯವರಿಗೆ ನನ್ನ ಸಾಂತ್ವನಗಳು ಎಂದರು. ಅಂದಹಾಗೆ, ಸರಣಿ ಸ್ಫೋಟದ ನಂತರ ಲಂಕಾಕ್ಕೆ ಭೇಟಿ ನೀಡಿದ ಮೊದಲ ವಿದೇಶಿ ಗಣ್ಯರೆಂದು ಮೋದಿ ಪರಿಗಣಿಸಲ್ಪಟ್ಟಿದ್ದಾರೆ. ಅಲ್ಲದೆ, ವಿಶ್ವನಾಯಕರೊಬ್ಬರ ಭೇಟಿಯು ಉಗ್ರರ ಅಟ್ಟಹಾಸಕ್ಕೆ ನಲುಗಿರುವ ಶ್ರೀಲಂಕಾಗೆ ಭರವಸೆಯನ್ನು ಮೂಡಿಸಿದೆ.

ಅಶೋಕ ಸಸಿ, ಬುದ್ಧನ ವಿಗ್ರಹ: ಮೋದಿಯವರು ಅಧ್ಯಕ್ಷರ ನಿವಾಸದ ಆವರಣದಲ್ಲಿ ಉಭಯ ದೇಶಗಳ ಸ್ನೇಹದ ಸಂಕೇತವಾಗಿ ಅಶೋಕ ಮರದ ಸಸಿಯೊಂದನ್ನು ನೆಟ್ಟರು. ಆನಂತರ, ಲಂಕಾ ಅಧ್ಯಕ್ಷ ಸಿರಿಸೇನಾ ಅವರು ಮೋದಿಯವರಿಗೆ ಸಮಾಧಿ ಸ್ಥಿತಿಯಲ್ಲಿರುವ ಬುದ್ಧನ ಪುತ್ಥಳಿಯನ್ನು ನೀಡಿ ಗೌರವಿಸಿದರು. 4ನೇ ಶತಮಾನದಿಂದ 7ನೇ ಶತಮಾನದ ಅವಧಿಯಲ್ಲಿ ಪುರಾತನ ಶ್ರೀಲಂಕಾದಲ್ಲಿ ಅನುರಾಧಾಪುರ ಎಂಬ ರಾಜ್ಯವು ಅಸ್ತಿತ್ವದಲ್ಲಿದ್ದಾಗ ಕೆತ್ತಲಾಗಿದೆ ಎಂಬ ಐತಿಹ್ಯ ಹಾಗೂ ವಿಶೇಷಣಗಳು ಈ ಪುತ್ಥಳಿಗೆ ಇದೆ.

ದ್ವಿಪಕ್ಷೀಯ ಮಾತುಕತೆ: ಮಧ್ಯಾಹ್ನದ ಹೊತ್ತಿಗೆ ಅಧ್ಯಕ್ಷರ ನಿವಾಸದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಮೋದಿ ಮತ್ತು ಮೈತಿಪಾಲ ಸಿರಿಸೇನಾ ಭಾಗವಹಿಸಿದ್ದರು. ಭದ್ರತೆಯ ವಿಚಾರದಲ್ಲಿ ಪರಸ್ಪರ ಸಹಕಾರ, ವಾಣಿಜ್ಯ ಹಾಗೂ ಸಾಂಸ್ಕೃತಿಕ ವಿಚಾರಗಳ ಬಗ್ಗೆ ಮಾತುಕತೆ ಕೇಂದ್ರೀಕೃತವಾಗಿತ್ತು. ಮಾತುಕತೆಯ ನಂತರ ಸಂಜೆಯ ಹೊತ್ತಿಗೆ ಪ್ರಧಾನಿ ಲಂಕಾದಿಂದ ಸ್ವದೇಶಕ್ಕೆ ಮರಳಿದರು.

ಭಾರತೀಯರ ಜತೆ ಸಂವಾದ: ಲಂಕಾದಲ್ಲಿರುವ ಭಾರತೀಯರೊಂದಿಗೆ ಸಂವಾದ ನಡೆಸುವ ಮೂಲಕ ಅಲ್ಲಿನ ಭಾರತೀಯರಲ್ಲಿ ಮೋದಿ ವಿದ್ಯುತ್‌ ಸಂಚಲನ ಉಂಟು ಮಾಡಿದರು. ಕೊಲಂಬೋದಲ್ಲಿ ಆಯೋಜಿಸಲಾಗಿದ್ದ ಈ ಸಂವಾದದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಭಾರತದ ವರ್ಚಸ್ಸು ದಿನಗಳೆದಂತೆ ವೃದ್ಧಿಸುತ್ತಿದೆ. ಇದಕ್ಕೆ ಭಾರತದಿಂದ ವಿದೇಶಗಳಿಗೆ ವಲಸೆ ಹೋಗಿರುವ ಅನಿವಾಸಿ ಭಾರತೀಯರ ಪಾಲೂ ಗಣನೀಯವಾಗಿದೆ ಎಂದರು.

ಪ್ರಜಾಪ್ರಭುತ್ವ, ಭಾರತದ ಅಂತಃಸತ್ವವಾಗಿದ್ದು, ಅದರ ಆಧಾರದ ಮೇಲೆ ಕಳೆದೈದು ವರ್ಷಗಳಲ್ಲಿ ತಮ್ಮ ಸರ್ಕಾರ ಗಣನೀಯವಾದದ್ದನ್ನು ಸಾಧಿಸಿದೆ. ಇನ್ನೂ ಅನೇಕವನ್ನು ಸಾಧಿಸಬೇಕಿದೆ. ಜನರ ಆಶಯಗಳನ್ನು ಪೂರೈಸುವಲ್ಲಿ ಯಾವುದೇ ಅಪಸ್ವರ ಕಾಣಿಸಿಕೊಳ್ಳಲು ಅವಕಾಶ ಕೊಡುವುದಿಲ್ಲ ಎಂದರು.

ಛತ್ರಿ ಹಿಡಿದು ಸ್ವಾಗತಿಸಿದ ಮೈತಿಪಾಲ

ಚರ್ಚ್‌ ಭೇಟಿಯ ನಂತರ, ಶ್ರೀಲಂಕಾದ ಅಧ್ಯಕ್ಷ ಮೈತಿಪಾಲ ಸಿರಿಸೇನಾ ಅವರ ನಿವಾಸಕ್ಕೆ ತೆರಳಿದ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಸಣ್ಣಗೆ ಸುರಿಯುತ್ತಿದ್ದ ಮಳೆಯಲ್ಲೇ ಬಿಗಿ ಭದ್ರತೆಯೊಂದಿಗೆ ಬಂದ ಮೋದಿ ಯವರ ಕಾರು ನಿವಾಸದ ಮುಂದೆ ನಿಲ್ಲುತ್ತಲೇ ಸಿರಿಸೇನಾ ಅವರೇ ಖುದ್ದಾಗಿ ಛತ್ರಿ ಹಿಡಿದು ಕಾರಿನತ್ತ ತೆರಳಿ ಮೋದಿಯವರನ್ನು ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.

ನನ್ನ ಹೃದಯದಲ್ಲಿ ಲಂಕಾಕ್ಕೆ ವಿಶೇಷ ಸ್ಥಾನವಿದೆ. ಶ್ರೀಲಂಕಾದ ನನ್ನ ಸಹೋದರ, ಸಹೋದರಿಯರ ನೋವು, ನಲಿವುಗಳೊಂದಿಗೆ ಜತೆಗಿರುತ್ತೇವೆ. ಅವರ ಬೆಂಬಲಕ್ಕೆ ಭಾರತ ಸದಾ ಸಿದ್ಧವಿರುತ್ತದೆ.
-ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.