ಸಂಬಂಧ ಸುಧಾರಣೆಗೆ ಭೀತಿವಾದ ವಿರುದ್ಧ ಪ್ರಬಲ ಕ್ರಮ ಅಗತ್ಯ : ಇಮ್ರಾನ್ಗೆ ಮೋದಿ ಪತ್ರ
Team Udayavani, Jun 20, 2019, 4:06 PM IST
ಹೊಸದಿಲ್ಲಿ : ಭೀತಿವಾದದ ವಿರುದ್ಧ ಪ್ರಬಲ ಕ್ರಮ ತೆಗೆದುಕೊಂಡರೆ ಮಾತ್ರವೇ ಭಾರತ-ಪಾಕಿಸ್ಥಾನ ಸಂಬಂಧ ಸುಧಾರಿಸಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪತ್ರ ಬರೆದಿದ್ದಾರೆ.
ಇಮ್ರಾನ್ ಖಾನ್ ಅವರು ಈಚೆಗಷ್ಟೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು “ಪಾಕಿಸ್ಥಾನವು ಹೊಸದಿಲ್ಲಿಯೊಂದಿಗೆ ಮಾತುಕತೆ ನಡೆಸಲು ಉತ್ಸುಕವಾಗಿದ್ದು ಕಾಶ್ಮೀರ ಸಹಿತ ಎಲ್ಲ ವಿಷಯಗಳನ್ನು ಬಗೆಹರಿಸಲು ಬಯಸಿದೆ’ ಎಂದು ಹೇಳಿದ್ದರು.
ಇದಕ್ಕೆ ಉತ್ತರವಾಗಿ ಪ್ರಧಾನಿ ಮೋದಿ ಅವರು ಯಾವುದೇ ಮಾತುಕತೆಗೆ ಭಯೋತ್ಪಾದನೆ ನಿಗ್ರಹದ ಪೂರ್ವ ಶರತ್ತನ್ನು ವಿಧಿಸಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಮಾತುಕತೆಗೆ ಮೊದಲು ವಿಶ್ವಾಸದ ವಾತಾವರಣ ನಿರ್ಮಿಸಬೇಕು; ಅದು ಭಯೋತ್ಪಾದನೆ, ಹಿಂಸೆ ಮತ್ತು ದ್ವೇಷದಿಂದ ಮುಕ್ತವಾಗಿರಬೇಕು; ಭಯೋತ್ಪಾದನೆ ಮತ್ತು ಮಾತುಕತೆ ಜತೆಜತೆಗೆ ಸಾಗಲಾರದು ಎಂದು ಮೋದಿ ತಮ್ಮ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ಥಾನದ ಅಭಿನಂದನಾ ಸಂದೇಶಕ್ಕೆ ಉತ್ತರಿಸುವ ಸ್ಥಾಪಿತ ರಾಜತಾಂತ್ರಿಕ ಪರಿಪಾಠಕ್ಕೆ ಅನುಗುಣವಾಗಿ ಪ್ರಧಾನಿ ಮೋದಿ ಅವರು ಪಾಕ್ ಪ್ರಧಾನಿಯ ಪತ್ರಕ್ಕೆ ಉತ್ತರಿಸಿದ್ದಾರೆ ಎಂದು ವಿದೇಶ ವ್ಯವಹಾರಗಳ ಸಚಿವಾಲಯ ಈ ವಿದ್ಯಮಾನವನ್ನು ದೃಢಪಡಿಸಿದೆ.
ಪ್ರಧಾನಿ ಮೋದಿ ಅವರು ಪಾಕ್ ಪ್ರಧಾನಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ‘ಭಾರತವು ಮಾತುಕತೆಗೆ ಒಪ್ಪಿದೆ’ ಎಂದು ಪಾಕ್ ಮಾಧ್ಯಮ ವರದಿ ಮಾಡಿದೆ. ಆದರೆ ಅಂತಹ ಯಾವುದೇ ವಿದ್ಯಮಾನ ಸಂಭವಿಸಿಲ್ಲ ಎಂದು ಹೊಸದಿಲ್ಲಿ ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ