ಬಿಜೆಪಿ ಸಂಸದರ‌ ಪಾದಯಾತ್ರೆ

ಗಾಂಧೀಜಿ 150ನೇ ಜನ್ಮದಿನಕ್ಕಾಗಿ ಪ್ರಧಾನಿ ಮೋದಿ ಹೊಸ ಕಾರ್ಯಕ್ರಮ

Team Udayavani, Jul 10, 2019, 6:00 AM IST

s-46

ನವದೆಹಲಿ: ಈ ವರ್ಷ, ಮಹಾತ್ಮ ಗಾಂಧಿಯವರ 150ನೇ ಜನ್ಮದಿನೋತ್ಸವ ವರ್ಷವಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಬಿಜೆಪಿ ಸಂಸದನೂ ತಮ್ಮ ಕ್ಷೇತ್ರದಲ್ಲಿ ಅಕ್ಟೋಬರ್‌ 2ರಿಂದ 31ರೊಳಗೆ 150 ಕಿ.ಮೀ.ಗಳವರೆಗೆ ಪಾದಯಾತ್ರೆ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎಲ್ಲಾ ಸಂಸದರಿಗೆ ಈ ಆದೇಶ ರವಾನಿಸಿರುವ ಮೋದಿ, ರಾಜ್ಯಸಭೆಯ ಬಿಜೆಪಿ ಸಂಸದರಿಗೆ ತಾವು ಪ್ರತಿನಿಧಿಸಿರುವ ರಾಜ್ಯಗಳಲ್ಲಿ ಬಿಜೆಪಿ ಎಲ್ಲಿ ದುರ್ಬಲವಾಗಿದೆಯೋ ಅಲ್ಲಿಗೆ ಭೇಟಿ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಂಸದೀಯ ವ್ಯವಹಾರಗಳ ಸಹಾಯಕ ಸಚಿವ ಅರ್ಜುನ್‌ ರಾಮ್‌ ಮೇಘ್ವಾಲ್, ಅ. 2ರಂದೇ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲರ ಜನ್ಮದಿನವೂ ಇರುವುದರಿಂದ ಆ ಇಬ್ಬರೂ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಈ ಪಾದಯಾತ್ರೆಗಳನ್ನು ಆಯೋಜಿಸಬೇಕು ಎಂಬುದು ಮೋದಿಯವರ ಆಶಯ ಎಂದು ತಿಳಿಸಿದರು.

ಜನಾಭಿಮತ ಅರಿಯುವ ಉದ್ದೇಶ: ಪಾದಯಾತ್ರೆಯ ರೂಪುರೇಷೆಗಳನ್ನು ವಿವರಿಸಿದ ಸಚಿವ ಮೇಘ್ವಾಲ್, ಪ್ರತಿಯೊಬ್ಬ ಸಂಸದನೂ ತನ್ನ ಕ್ಷೇತ್ರದಲ್ಲಿ ಪಾದಯಾತ್ರೆಗಾಗಿ 150 ಗುಂಪುಗಳನ್ನು ರಚಿಸಬೇಕು. ಆ ಗುಂಪುಗಳೆಲ್ಲವೂ 150 ಕಿ.ಮೀ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕು. ಆಯಾ ಕ್ಷೇತ್ರದ ಸಂಸದರು ಆ ಗುಂಪುಗಳ ಜತೆಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಬೇಕು ಎಂದರು. ಜನರೊಟ್ಟಿಗೆ ಸಂಸದರು ಬೆರೆಯುವಂತೆ ಮಾಡಲು, ಸರ್ಕಾರದ ಆಡಳಿತದ ಬಗ್ಗೆ ಜನರ ಪ್ರತಿಕ್ರಿಯೆಗಳನ್ನು ದಾಖಲಿಸುವ ಹಾಗೂ ಸರ್ಕಾರದ ಬಗ್ಗೆ ಅವರು ಹೊಂದಿರುವ ನಿರೀಕ್ಷೆಗಳನ್ನು ಅರಿಯುವ ಉದ್ದೇಶವೂ ಈ ಪಾದಯಾತ್ರೆಯ ಹಿಂದಿದೆ ಎಂದು ಅವರು ತಿಳಿಸಿದರು.

ಗಿಡ ನೆಡುವ ಕ್ರಾರ್ಯಕ್ರಮ ಹಮ್ಮಿಕೊಳ್ಳಲು ಸೂಚನೆ
”ಪಾದಯಾತ್ರೆಯ ಜತೆಗೆ ತಮ್ಮ ಕ್ಷೇತ್ರಗಳಲ್ಲಿ ಎಲ್ಲಾ ಸಂಸದರೂ ಗಿಡ ನೆಡುವುದು, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂಥ ಕೆಲಸಗಳನ್ನು ಮಾಡಬೇಕು ಎಂದಿರುವ ಪ್ರಧಾನಿ ಮೋದಿ, ಹಳ್ಳಿಗಳ ಸಮಸ್ಯೆ ನಿರ್ಮೂಲನೆಯ ಕಾರ್ಯಗಳಿಗೆ ಚಾಲನೆ ನೀಡಬೇಕು ಎಂದೂ ಸೂಚಿಸಿದ್ದಾರೆ” ಎಂದು ಮೇಘ್ವಾಲ್ ಹೇಳಿದ್ದಾರೆ. ಅಸಲಿಗೆ, ಅ. 2ರಿಂದ ಗಾಂಧಿಯವರ ಪುಣ್ಯತಿಥಿಯಾದ ಜ. 31ರವರೆಗೆ ಪಾದಯಾತ್ರೆಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆಯಾದರೂ, ಆ ಕಾರ್ಯಕ್ರಮದ ಅವಧಿಯನ್ನು ಪಕ್ಷವೇ ನಿರ್ಧರಿಸಲಿದೆ” ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.