ಭಾರತೀಯನ ಶಿರಚ್ಛೇದ: ಮೋದಿ ಮೌನ ಪ್ರಶ್ನಿಸಿದ ಕಾಂಗ್ರೆಸ್
Team Udayavani, Jan 12, 2020, 9:58 PM IST
ನವದೆಹಲಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಗಡಿ ಕಾರ್ಯಾಚರಣೆ ಪಡೆ (ಬ್ಯಾಟ್), ಭಾರತದ ನಾಗರಿಕನೊಬ್ಬನ ಶಿರಚ್ಛೇದ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ನೀಡದಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ, “”ಪಾಕಿಸ್ತಾನ ಯೋಧರು ಭಾರತೀಯ ಕೂಲಿಯಾಳುವೊಬ್ಬನ ಶಿರಚ್ಛೇದ ಮಾಡಿ, ಇಬ್ಬರು ಭಾರತೀಯ ಯೋಧರನ್ನೂ ಹತ್ಯೆಗೈದಿದ್ದಾರೆ. ಈ ಬಗ್ಗೆ ಪ್ರಧಾನಿಯಾಗಲೀ, ಕೇಂದ್ರ ಗೃಹ ಸಚಿವರಾಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಕಿಸ್ತಾನದ ಈ ಹೇಯ ಕೃತ್ಯದ ಬಗ್ಗೆ ಮೋದಿಯವರ ಸರ್ಕಾರ ಏಕೆ ಮೌನವಾಗಿದೆ? ಈ ಮೌನವನ್ನು ಮಾಧ್ಯಮಗಳೂ ಏಕೆ ಪ್ರಶ್ನೆ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.
“”ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರದ ಸ್ಥಿತಿಗತಿಗಳನ್ನು ನೋಡಿಕೊಂಡು ಪಾಕಿಸ್ತಾನದ ಸೇನೆಯ ಕೈಯ್ಯಲ್ಲಿ ಹುತಾತ್ಮರಾಗುವ ಭಾರತೀಯ ಯೋಧರ ಸುದ್ದಿಗಳನ್ನು ಬಿತ್ತರಿಸಬೇಕೇ, ಬೇಡವೇ ಎಂಬುದನ್ನು ಮಾಧ್ಯಮಗಳು ನಿರ್ಧರಿಸುತ್ತವೆಯೇ? ಪಾಕಿಸ್ತಾನದ ಈ ಹೇಯ ಕೃತ್ಯಕ್ಕೆ ಪ್ರತೀಕಾರ ಯಾವಾಗ? ಭಾರತೀಯ ಯೋಧರ ಒಂದು ತಲೆಗೆ ಪ್ರತಿಯಾಗಿ ಪಾಕ್ ಸೈನಿಕರ 10 ತಲೆಗಳನ್ನು ತರುತ್ತೇವೆ ಎಂಬ ವೀರಾವೇಶದ ಮಾತುಗಳು ಈಗ ಎಲ್ಲಿ ಹೋದವು?” ಎಂದು ಅವರು ಖಾರವಾಗಿ ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ