ಹಣ ಬಿಟ್ಬಿಟ್ಟು ಟಾಯ್ಲೆಟ್ ಕಟ್ಟಿದ್ರು
Team Udayavani, Jun 11, 2017, 3:10 PM IST
ಬಿಜ್ನೋರ್: ಶೌಚಾಲಯ ಕಟ್ಟಿಸಿಕೊಳ್ಳಲು ಸರಕಾರ ಬಿಡುಗಡೆ ಮಾಡಿದ್ದ 17.5 ಲಕ್ಷ ರೂ. ಹಿಂದಿರುಗಿಸಿದ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಗ್ರಾಮವೊಂದರ ನಿವಾಸಿಗಳು, ಸ್ವಂತ ಹಣದಲ್ಲೇ ಶೌಚಾಲಯ ಕಟ್ಟಿಕೊಳ್ಳುವ ಮೂಲಕ ಇಡೀ ದೇಶಕ್ಕೇ ಮಾದರಿಯಾಗಿದ್ದಾರೆ. ಈ ಮೂಲಕ ರಮ್ಜಾನ್ ತಿಂಗಳನ್ನು ಅರ್ಥಪೂರ್ಣವಾಗಿ ಆಚರಿಸುವುದು ಇಲ್ಲಿನ ಜನರ ಆಶಯವಾಗಿದೆ.
ಮುಸ್ಲಿಂ ಪ್ರಾಬಲ್ಯವಿರುವ ಮುಬಾರಕ್ಪುರ್ ಕಾಲಾ ಗ್ರಾಮದಲ್ಲಿ 661 ಕುಟುಂಬಗಳಿದ್ದು, ಈ ಪೈಕಿ ಕೇವಲ 146 ಕುಟುಂಬಗಳು ಮಾತ್ರ ಶೌಚಾಲಯ ಹೊಂದಿದ್ದವು. ಉಳಿದವರೆಲ್ಲ ಶೌಚಕ್ಕೆ ಬಯಲನ್ನೇ ಆಶ್ರಯಿಸಿದ್ದರು. ಹೀಗಾಗಿ ಗ್ರಾಮವನ್ನು ಬಯಲು ಶೌಚಮುಕ್ತವಾಗಿಸಲು ಸ್ಥಳೀಯ ಪಂಚಾಯತ್ಗೆ ಜಿಲ್ಲಾಡಳಿತದಿಂದ 17.5 ಕೋಟಿ ರೂ. ಮಂಜೂರಾಯಿತು. ಆದರೆ “ಇದು ರಮ್ಜಾನ್ ತಿಂಗಳು. ಈ ಪವಿತ್ರ ಮಾಸದಲ್ಲಿ ದಾನ ಕೊಡಬೇಕೇ ಹೊರತು, ಉತ್ತಮ ಕೆಲಸಕ್ಕಾಗಿ ಹಣಕಾಸು ನೆರವು ಪಡೆಯುವುದು ತಪ್ಪಾಗುತ್ತದೆ. ಎಲ್ಲ ಮನೆಗಳಲ್ಲೂ ಶೌಚಾಲಯ ಕಟ್ಟುವುದು ಒಳ್ಳೆಯ ಕೆಲಸ. ಹಾಗೇ ಈ ಕೆಲಸವನ್ನು ನಮ್ಮ ಹಣದಲ್ಲೇ ಮಾಡಿಕೊಳ್ಳುತ್ತೇವೆ’ ಎಂದು ಜಿಲ್ಲಾಡಳಿತಕ್ಕೆ ಪತ್ರ ಬರೆದ ಗ್ರಾಮಸ್ಥರು, ಒಟ್ಟೂ ಹಣವನ್ನು ಹಿಂದಿರುಗಿಸಿದ್ದಾರೆ. ಪರಿಶೀಲನೆ ನಡೆಸಿದ ಅಧಿಕಾರಿಗಳು ಈ ಗ್ರಾಮವನ್ನು “ಬಯಲು ಶೌಚ ಮುಕ್ತ ಗ್ರಾಮ’ ಎಂದು ಘೋಷಿಸಿದ್ದಾರೆ. ಸಾರ್ವಜನಿಕರ ನಿರ್ಧಾರವನ್ನು “ಉದಾತ್ತ ಚಿಂತನೆ’ ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ