Goa ಸಚಿವ ಸ್ಥಾನದಿಂದ ಮಾನ್ಸೆರೆಟ್ ರನ್ನು ವಜಾ ಮಾಡಿ: ಪರ್ರಿಕರ್ ಪುತ್ರ ಕಿಡಿ

ಸುಮ್ಮನೆ ಕುಳಿತು ನೋಡುವುದಾದರೆ ಮನೆಯಲ್ಲಿ ಕೂರಬೇಕು...

Team Udayavani, May 27, 2023, 4:09 PM IST

1-dsa-sad

ಪಣಜಿ: ಪಣಜಿ ಶಾಸಕ ಬಾಬುಷ್ ಮಾನ್ಸೆರೆಟ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ  ಮಾಜಿ ರಕ್ಷಣಾ ಸಚಿವ ದಿ.ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಪರ್ರಿಕರ್ ಒತ್ತಾಯಿಸಿದ್ದಾರೆ.

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಉತ್ಪಲ್ ಪರ್ರಿಕರ್ ‘ನಾನು ಪಣಜಿಯಲ್ಲಿ ಏನಾದರೂ ಅಭಿವೃದ್ಧಿ ಆಗಬಹುದೆಂದು ಕಾಯುತ್ತಿದ್ದೇನೆ.ಸುಮ್ಮನೆ ಕುಳಿತು ನೋಡುವುದಾದರೆ ಮನೆಯಲ್ಲಿ ಕೂರಬೇಕು. ಸುಮ್ಮನೆ ಕೂರಬೇಕಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. 15 ಟ್ರಕ್‍ಗಳು ರಸ್ತೆಯಲ್ಲಿ ಸಿಲುಕಿಕೊಳ್ಳುವವರೆಗೆ ಅವರು ಸುಮ್ಮನೆ ಕಾದು ಕುಳಿತುಕೊಂಡಿರುವರೆ? ಎಂದು ಪ್ರಶ್ನಿಸಿದ್ದಾರೆ.

ಒಂದು ತಿಂಗಳ ಹಿಂದೆಯಷ್ಟೇ ಮುಖ್ಯಮಂತ್ರಿಗಳು ಪಣಜಿಯತ್ತ ಗಮನ ಹರಿಸಲು ಆರಂಭಿಸಿದ್ದಾರೆ.ಪಣಜಿ ಮಹಾನಗರದ ಅಭಿವೃದ್ಧಿ ವಿಷಯ ಏಕೆ ಹೀಗಾಯಿತು ಎಂದು ಸಚಿವ ಬಾಬುಷ್ ಮೊನ್ಸೆರೆಟ್ ರವರನ್ನು ಕೇಳಬೇಕು. ಪಣಜಿಯಲ್ಲಿ ಬಾಬುಷ್ ಮೊನ್ಸೆರೆಟ್ ಅವರಂತಹ ಅಭ್ಯರ್ಥಿಗೆ ಚುನಾವಣೆಯಲ್ಲಿ ಸ್ಫರ್ಧಿಸಲು ಬಿಜೆಪಿಯಿಂದ ಹೇಗೆ ಟಿಕೆಟ್ ನೀಡಲಾಯಿತು ಎಂದು ಉತ್ಪಲ್ ಪ್ರಶ್ನಿಸಿದರು.

”ಚುನಾವಣೆ ಸಂದರ್ಭದಲ್ಲಿ ನನಗೆ ಬಂದ ಒತ್ತಡಗಳ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ನನ್ನ ತಂದೆ ಮನೋಹರ್ ಪರ್ರಿಕರ್ ಪಕ್ಷದಲ್ಲಿ 30 ವರ್ಷ ದುಡಿದಿದ್ದಾರೆ. ನನ್ನ ತಂದೆಯ ನಂತರ ಪಣಜಿ ಕ್ಷೇತ್ರದಲ್ಲಿ ಮೊನ್ಸೆರೆಟ್ ರವರಿಗೆ ಪಕ್ಷದಿಂದ ಟಿಕೆಟ್ ನೀಡಲಾಯಿತು. ಇದರಿಂದಾಗಿ ಅವರು ಮೇಲುಗೈ ಸಾಧಿಸಿದರು ಎಂದರು.

ಕಳೆದ ಬಾರಿ ನಾನು ಚುನಾವಣಾ ಅಖಾಡಕ್ಕೆ ಧುಮುಕುತ್ತಿದ್ದಂತೆಯೇ ಅವರಿಗೆ ಕಮಲ ಚಿಹ್ನೆ ಇದೆ ಎಂದು ತೋರಿಸಲು ಪ್ರಾರಂಭಿಸಲಾಯಿತು. ಆದ್ದರಿಂದ ಅವರು ಪಣಜಿಯಲ್ಲಿ ಗೆಲುವು ಸಾಧಿಸಿದರು. ಆದರೆ ಪಣಜಿಯ ಎಲ್ಲಾ ಕಾರ್ಯಕರ್ತರು ಮತ್ತು ಬಹುತೇಕ ಮತದಾರರು ನನ್ನ ಬೆನ್ನಿಗಿದ್ದರು. ಬಾಬುಷ್ ಬಿಜೆಪಿ ಚಿಹ್ನೆ ಪಡೆದು ರಾಜಕೀಯ ಲಾಭ ಪಡೆದಿರಬಹುದು,  ಆದರೆ ಪಣಜಿಯ ಜನ ಈಗ  ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಉತ್ಪಲ್ ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾನ್ಸೆರೆಟ್ ವಿರುದ್ಧ ಸೋಲು ಅನುಭವಿಸಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.