ಮುಂದಿನ 24 ತಾಸೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ
Team Udayavani, Jun 7, 2019, 4:14 PM IST
ಹೊಸದಿಲ್ಲಿ : ಮುಂದಿನ 24 ತಾಸುಗಳ ಒಳಗೆ ಕೇರಳದಲ್ಲಿ ಮುಂಗಾರು ಮಳೆ ಬಹುತೇಕ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ನೈಋತ್ಯ ಮಾರುತಗಳು ಮುಂದಿನ 24 ತಾಸುಗಳಲ್ಲಿ ಕೇರಳ ಕರಾವಳಿ ಪ್ರವೇಶಿಸುವ ಹಿನ್ನೆಲೆಯಲ್ಲಿ ಕೇರಳದ ಪ್ರಾಕೃತಿಕ ವಿಕೋಪ ವ್ಯವಸ್ಥಾಪನ ಪ್ರಾಧಿಕಾರ ರಾಜ್ಯಕ್ಕೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ.
ಕೇರಳದ ತಿರುವನಂತಪುರ, ಕೊಲ್ಲಂ, ಅಳಪ್ಪುಝ ಮತ್ತು ಎರ್ನಾಕುಳಂ ಜಿಲ್ಲೆಗಳಿಗೆ ಸಂಬಂಧಿಸಿ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ. ಇದರ ಪ್ರಕಾರ ಜೂನ್ 10ರಂದು ಈ ಜಿಲ್ಲೆಗಳಲ್ಲಿ ಭಾರಿಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ.
ಇದೇ ವೇಳೆ ಭಾರೀ ಮಳೆಯ ಯೆಲ್ಲೋ ಅಲರ್ಟ್ ಸೂಚನೆಯನ್ನು ಕೇರಳದ ಇತರ ಏಳು ಜಿಲ್ಲೆಗಳಿಗೆ ಸಂಬಂಧಿಸಿ ಜೂನ್ 9 ಭಾರೀ ಮಳೆಗೆ ಮತ್ತು ಐದು ಜಿಲ್ಲೆಗಳಿಗೆ ಜೂನ್ 10ರ ಭಾರೀ ಮಳೆಗೆ ಸಂಬಂಧಪಟ್ಟು ನೀಡಲಾಗಿದೆ.
ಮಾನ್ಸೂನ್ ಪ್ರವೇಶ ವಿಳಂಬವಾಗಿರುವುದನ್ನು ಅನುಸರಿಸಿ ಉತ್ತರ ಭಾರತದ ಬಹು ಭಾಗವನ್ನು ಈಗ ಕಾಡುತ್ತಿರುವ ತೀವ್ರತಮ ಉಷ್ಣತೆಯು ಇನ್ನೂ ಒಂದು ವಾರ ಕಾಲ ತನ್ನ ಪ್ರತಾಪವನ್ನು ತೋರಿಸಲಿದೆ ಎಂದೂ ಐಎಂಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ