ವಾಯು ಚಂಡಮಾರುತದಿಂದ ಮುಂಗಾರು ವಿಳಂಬ; ಗುಜರಾತ್ನಲ್ಲಿ ಭಾರೀ ಮಳೆ
Team Udayavani, Jun 11, 2019, 11:19 AM IST
ಹೊಸದಿಲ್ಲಿ : ನಾಳೆ ಬುಧವಾರ ಜೂನ್ 12ರಂದು ಗುಜರಾತ್ ಕರಾವಳಿಗೆ ಅಪ್ಪಳಿಸುವ ‘ವಾಯು’ ಚಂಡಮಾರುತದ ಪರಿಣಾಮವಾಗಿ ದೇಶದಲ್ಲಿ ಮುಂಗಾರು ಮಳೆ ನೆಲೆಗೊಳ್ಳುವುದು ಇನ್ನಷ್ಟು ವಿಳಂಬಗೊಳ್ಳಲಿದೆ.
ಚಂಡಮಾರುತದಿಂದ ಆಗಬಹುದಾದ ನಾಶ ನಷ್ಟ, ಹಾನಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಗುಜರಾತ್ ಸರಕಾರ ಈಗಾಗಲೇ ಕಟ್ಟೆಚ್ಚರ ಘೋಷಿಸಿದೆ ಮತ್ತು ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.
ಸಾಮಾನ್ಯವಾಗಿ ಜೂನ್ 15ರ ವೇಳೆಗೆ ದೇಶದಲ್ಲಿ ಮುಂಗಾರು ಮಳೆ ನೆಲೆಗೊಳ್ಳುವುದು ವಾಡಿಕೆ. ಆದರೆ ‘ವಾಯು’ ಚಂಡಮಾರುತದ ಪರಿಣಾಮವಾಗಿ ಮುಂಗಾರು ಮಳೆ ನೆಲೆಗೊಳ್ಳುವುದು, ಮುನ್ನಡೆ ಸಾಧಿಸುವುದು, ದೇಶವ್ಯಾಪಿಯಾಗುವುದೇ ಮೊದಲಾದ ಪ್ರಕ್ರಿಯೆಗಳು ವಿಳಂಬವಾಗಲಿದೆ. ಮುಂಗಾರು ಮಳೆ ಈಗಾಗಲೇ ಒಂದು ವಾರ ತಡವಾಗಿ ಕೇರಳ ಪ್ರವೇಶಿಸಿದೆ.
ಭಾರತೀಯ ಹವಾಮಾನ ಇಲಾಖೆ ತಿಳಿಸಿರುವ ಪ್ರಕಾರ ವಾಯು ಚಂಡಮಾರುತ ಸೋಮವಾರ ರಾತ್ರಿ 11.30ರ ವೇಳೆಗೆ ಮುಂಬಯಿಯಿಂದ 630 ಕಿ.ಮೀ. ದಕ್ಷಿಣ ನೈಋತ್ಯದಲ್ಲಿ ಸ್ಥಿತವಾಗಿದೆ.
ವಾಯು ಚಂಡಮಾರುತ ಗುಜರಾತ್ ಕರಾವಳಿಗೆ ಅಪ್ಪಳಿಸುವ ಹೊತ್ತಿಗೆ ಅದು ತೀವ್ರ ಸ್ವರೂಪವನ್ನು ಪಡೆಯಲಿದೆ. ಅದು ಉತ್ತರಾಭಿಮುಖವಾಗಿ ಗುಜರಾತ್ ಕರಾವಳಿಯನ್ನು ದಾಟಲಿದೆ.
ಹಾಗೆ ಮುನ್ನುಗ್ಗುವ ತನ್ನ ಪಥದಲ್ಲಿ ಅದು ಪೋರಬಂದರ್, ಮಹಉವಾ, ವೆರಾವಲ್ ಮತ್ತು ದೀವ್ ಮೂಲಕ ಸಾಗುವಾಗ ತೀವ್ರತಮ ಚಂಡಮಾರುತವಾಗಿ ಗಂಟೆಗೆ 110 ರಿಂದ 120 ಕಿ.ಮೀ ವೇಗವನ್ನು ಪಡೆದುಕೊಂಡು ಜೂನ್ 13ರ ನಸುಕಿನ ವೇಳಗೆ 135 ಕಿ.ಮೀ. ವೇಗದಲ್ಲಿ ಮುನ್ನುಗ್ಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್