ದಕ್ಷಿಣಕ್ಕೆ ಮುಂಗಾರು ಕೊರತೆ
Team Udayavani, Apr 5, 2018, 7:00 AM IST
ಹೊಸದಿಲ್ಲಿ: ಖಾಸಗಿ ಹವಾಮಾನ ಸಂಸ್ಥೆ ಯಾದ ಸ್ಕೈಮೆಟ್, ಪ್ರಸಕ್ತ ಸಾಲಿನ ಮುಂಗಾರಿನ ಬಗ್ಗೆ ವಿಶ್ಲೇಷಣಾ ವರದಿ ನೀಡಿದೆ. ಅದರಂತೆ, ಈ ವರ್ಷದ ಮುಂಗಾರು ತೃಪ್ತಿದಾಯಕವಾಗಿರಲಿದೆ. ಆದರೆ, ದಕ್ಷಿಣ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು, ಕೇರಳ ಭಾಗಗಳು ಕೊಂಚ ಮಳೆ ಕೊರತೆ ಎದುರಿಸಬೇಕಾಗುತ್ತದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲೂ ಮಳೆ ಕೊರತೆ ಕಂಡು ಬರಲಿದ್ದು, ತೆಲಂಗಾಣದಲ್ಲಿ ಮಾತ್ರ ಸಾಮಾನ್ಯ ಮಳೆಯಾಗಲಿದೆ ಎಂದು ಸಂಸ್ಥೆ ಹೇಳಿದೆ.
ಇನ್ನು, ದೇಶಾದ್ಯಂತ 887 ಮಿಲಿಮೀಟರ್ನಷ್ಟು ಮಳೆ ಬೀಳಲಿದೆ ಎಂದು ಹೇಳಿರುವ ಸಂಸ್ಥೆ, ಈ ಬಾರಿ ಬರ ಆವರಿಸುವ ಅವಕಾ ಶವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಜೂನ್ನಲ್ಲಿ ಅತಿ ಮಳೆ ಸುರಿಯಲಿದ್ದು, ಜುಲೈನಲ್ಲಿ ಸಾಮಾನ್ಯವಾಗಿ ಸುರಿಯುವ ಮಳೆ, ಆಗಸ್ಟ್ ವೇಳೆ ಸಮಾಧಾನಕರವಾಗಿರಲಿದೆ. ಆದರೆ, ಸೆಪ್ಟಂಬರ್ನಿಂದ ಮತ್ತೆ ಬಿರುಸು ಪಡೆಯಲಿವೆ. ಒಟ್ಟಾರೆಯಾಗಿ, ಈ ಬಾರಿಯ ನಿರೀಕ್ಷೆಯಲ್ಲಿ ಶೇ. 70ರಷ್ಟು ನಿರೀಕ್ಷೆಯನ್ನು ಈ ಬಾರಿಯ ಮುಂಗಾರು ಮುಟ್ಟಲಿದೆ. ಇದೇ ವೇಳೆ, ಸಾಮಾನ್ಯ ಮುಂಗಾರಿಗಿಂತ ಕೊಂಚ ಉತ್ತಮವಾಗಿ ಮಳೆ ಬೀಳುವ ಸಾಧ್ಯತೆಗಳು ಶೇ. 20ರಷ್ಟು ಹೆಚ್ಚಾಗಿದ್ದು, ಸಾಮಾನ್ಯಕ್ಕಿಂತ ಕಡಿಮೆ ಮಳೆ ಬೀಳುವ ಅವಕಾಶವೂ ಶೇ. 20ರಷ್ಟಿದೆ ಎಂದು ಸಂಸ್ಥೆ ತಿಳಿಸಿದೆ. ಭಾರತೀಯ ಹವಮಾನ ಇಲಾಖೆ ಈ ತಿಂಗಳ ಮಧ್ಯಭಾಗದಲ್ಲಿ ತನ್ನ ಮಂಗಾರು ಕುರಿತ ವರದಿಯನ್ನು ಬಿಡುಗಡೆ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ